ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…