ಮಳೆಯ ಅಬ್ಬರ – ಕಂಗಾಲಾದ ರೈತರು

October 27, 2025
9:58 PM

ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ.  ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ. 

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ
March 15, 2026
1:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror