ಮಳೆಯ ಅಬ್ಬರ – ಕಂಗಾಲಾದ ರೈತರು

October 27, 2025
9:58 PM

ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ.  ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ. 

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror