ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ. ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…