ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ. ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…