ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ. ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…