ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ. ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…