ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

October 12, 2022
10:19 PM

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror