Advertisement
MIRROR FOCUS

ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

Share

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

17 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

18 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

19 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

20 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago