MIRROR FOCUS

ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

Advertisement
Advertisement

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ

ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…

8 minutes ago

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

28 minutes ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

32 minutes ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

10 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

10 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

11 hours ago