MIRROR FOCUS

ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

Advertisement

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

19 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

22 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

23 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

23 hours ago

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…

1 day ago

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…

1 day ago