Advertisement
MIRROR FOCUS

ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

Share

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

10 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

13 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

18 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 day ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago