ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.
ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ. ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.
ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.
ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.
ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ. ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…