Advertisement
MIRROR FOCUS

ಹೆಚ್ಚುತ್ತಿರುವ ಮಳೆ ಅಬ್ಬರ | ತೀವ್ರ ಬೆಳೆ ನಷ್ಟ ಅನುಭವಿಸುತ್ತಿರುವ ರೈತರು |

Share

ಇತ್ತೀಚೆಗಿನ ಕೆಲ ವರ್ಷಗಳಿಂದ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಕಾಣುತ್ತಿದೆ. ಅತಿಯಾದ ತಾಪಮಾನ ಹಾಗೂ ಅತಿಯಾದ ಮಳೆಯಿಂದ ಕೃಷಿ ಹಾನಿಯಾಗುತ್ತಿದೆ. ಈಗ ಮಳೆ ಅಬ್ಬರದ ಕಾರಣದಿಂದ ಮಳೆಯಾಧಾರಿತ ಕೃಷಿಗಳಲ್ಲಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ಇತರ ರಾಜ್ಯಗಳಲ್ಲೂ ಈ ಸಮಸ್ಯೆ ಹೆಚ್ಚಾಗಿದೆ.

ಮಹಾರಾಷ್ಟ್ರದ ಕೆಲವು ಪ್ರದೇಶದ ರೈತರು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಿರಂತರ ಮಳೆಯಿಂದಾಗಿ ತೀವ್ರ ಹೊಡೆತವನ್ನು ಅನುಭವಿಸಿದರು. ಜುಲೈ 2022 ರಲ್ಲಿ ರೈತರು ಕೋಟ್ಯಂತರ ರೂಪಾಯಿಗಳ  ನಷ್ಟವನ್ನು ಅನುಭವಿಸಿದ್ದರು. ಮಹಾರಾಷ್ಟ್ರದ ಔರಂಗಾಬಾದ್‌ನ ವಿಭಾಗೀಯ ಕಮಿಷನರೇಟ್ ಪ್ರಕಾರ, 4.48 ಮಿಲಿಯನ್ ರೈತರು ತೀವ್ರ ಬೆಳೆ ಹಾನಿಯನ್ನು ಅನುಭವಿಸಿದ್ದಾರೆ. ಇದು ಈಚೆಗೆ ಹೆಚ್ಚಾಗುತ್ತಿದೆ.  ಅನಿರೀಕ್ಷಿತ ಮಳೆಯಿಂದಾಗಿ ಸುಮಾರು 36,52,872 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಗಾಗಿದೆ, ಅದರಲ್ಲಿ 35,34,371 ಹೆಕ್ಟೇರ್ ಮಳೆಯಾಶ್ರಿತವಾಗಿದೆ. ಈ ಋತುವಿನಲ್ಲಿ ಔರಂಗಾಬಾದ್, ಬೀಡ್ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಒಟ್ಟು ಬಿತ್ತನೆ ಪ್ರದೇಶವು ಸುಮಾರು 20,67,896 ಹೆಕ್ಟೇರ್ ಎಂದು ಇಲಾಖೆ ವರದಿ ಮಾಡಿದೆ.

ರಾಜ್ಯದಲ್ಲಿ ಕೂಡಾ ಅದೇ ಮಾದರಿಯಲ್ಲಿ ಮಳೆಯಿಂದಾಗಿ ಕೃಷಿ ಹಾನಿಯಾಗಿದೆ. ಬೀದರ ಜಿಲ್ಲೆಯ ರೈತನೊಬ್ಬ ಮಳೆಯಿಂದಾದ ಹಾನಿಯನ್ನು  ವಿವರಿಸುತ್ತಾ, ಸೆಪ್ಟೆಂಬರ್ ತಿಂಗಳು ಬೆಳೆಗಳು ಕೊಯ್ಲು ಪ್ರಾರಂಭವಾಗುವ ತಿಂಗಳು. ಈ ಸಮಯದಲ್ಲಿ ಮಳೆಯಾದರೆ ವಿಪರೀತ ನಷ್ಟವಾಗುತ್ತದೆ ಎನ್ನುತ್ತಾರೆ. ಇನ್ನೊಬ್ಬ ರೈತ ಹತ್ತಿ ಬೆಳೆಯ ಸಂಕಷ್ಟದ ಬಗ್ಗೆ ಮಾತನಾಡಿ ನಾನು ಮೂರು ಎಕರೆ  ಭೂಮಿಯಲ್ಲಿ ಹತ್ತಿ ಬೆಳೆದಿದ್ದೇನೆ. ಕಳೆದ ತಿಂಗಳ ಮಳೆಯಿಂದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಹವಾಮಾನ ಬದಲಾವಣೆಯ ಕಾರಣದಿಂದ ಈಗ ಸಮಸ್ಯೆಯಾಗುವುದು  ಕೃಷಿಗೆ. ಯಾವುದೇ ರೀತಿಯ ಕೀಟಬಾಧೆಯಾಗದಂತೆ ರೈತರು ಮುನ್ನೆಚ್ಚರಿಕೆ ವಹಿಸಿ ಸಾಕಷ್ಟು ಎಚ್ಚರಿಕೆಯಿಂದ ಕೃಷಿ ಮಾಡುತ್ತಾರೆ. ಸಕಾಲದಲ್ಲಿ ಗೊಬ್ಬರವ್ನನೂ ನೀಡುತ್ತಾರೆ. ಆದರೆ ಬೆಳ ಕಟಾವಿಗೆ ಬರುವಾಗ ಅಥವಾ ಹೂವು ಬಿಡಲು ಆರಂಭವಾಗುವ ವೇಳೆ ಮಳೆಯಾದರೆ ಕೃಷಿ ನಷ್ಟವಾಗುತ್ತದೆ, ಕೃಷಿಯ ಶ್ರಮ ವ್ಯರ್ಥವಾಗುತ್ತದೆ.

ಇತ್ತೀಚೆಗೆ ಅಕಾಲದಲ್ಲಿ ಮಳೆಯಾಗುವ ಕಾರಣದಿಂದ ತರಕಾರಿ, ಭತ್ತ, ಬಾಳೆ, ಸೇರಿದಂತೆ ಧಾನ್ಯಗಳಿಗೆ ಹಾನಿಯಾದರೆ ಈ ಕಡೆಗೆ ಅಡಿಕೆ ಒಣಗಿಸಲು, ಕೊಳೆರೋಗದಂತಹ ಬೆಳೆಗಳೂ ಸಂಕಷ್ಟದಲ್ಲಿವೆ.  ಹೀಗಾಗಿ ಈಚೆಗೆ ಕೃಷಿಕರ ವಲಯದಲ್ಲಿಯೇ ಹವಾಮಾನ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago