ಆಲಿಕಲ್ಲು ಮಳೆಗೆ ತತ್ತರಿಸಿದ ರೈತರು | ಮಣ್ಣು ಪಾಲಾದ ಮೆಣಸಿನಕಾಯಿ, ಪಪ್ಪಾಯ, ಭತ್ತದ ಬೆಳೆ |

March 19, 2023
12:11 PM

ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ ಬಿಟ್ಟಿದೆ. ಈ ಬಾರಿಯಾದ್ರು ಇಳಿಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಕರಾವಳಿಗೆ ಮೆಣಸು ಏನಿದ್ರು ಉತ್ತರ ಕರ್ನಾಟಕದ ಕಡೆಯಿಂದಲೇ ಬರಬೇಕು. ಅಲ್ಲಿ ಮಳೆ ಬೆಳೆ ಚೆನ್ನಾಗಿ ಆದ್ರೆ ನಮಗೆ ಮೆಣಸಿನ ರೇಟಿನ ಘಾಟು ಸ್ವಲ್ಪ ಕಮ್ಮಿ ಆಗಬಹುದು. ಆದ್ರೆ ಈ ಬಾರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.

ಬಿಸಿಲಿನ ಧಗೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ ಬೇಸಿಗೆ ಆರಂಭದಲ್ಲಿಯೇ ವರುಣ ದೇವ ಭಾರೀ ಅವಾಂತರ ಮಾಡಿದ್ದಾನೆ. ಆಲಿಕಲ್ಲು ಮಳೆಗೆ ಅನ್ನದಾತರು ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಬೃಹತ್ ಗಾತ್ರದ ಆಲಿಕಲ್ಲುಗಳು ಧರೆಗುರುಳಿದ್ದ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದೆ.

Advertisement

ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ತಡರಾತ್ರಿ ಹಾಗೂ ಬೆಳಗಿನ ಜಾವ ಯಾದಗಿರಿ ಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.ಯಾದಗಿರಿ ನಗರದಲ್ಲಿ ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನಗರದ ರೈಲ್ವೆ ನಿಲ್ದಾಣ ರಸ್ತೆ ಜಲಾವೃತ ಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಹಲವು ಭಾಗದಲ್ಲಿ ಆಲಿಕಲ್ಲು ಮಳೆ ಯಾಗಿದ್ದು ಸಣ್ಣ ಸಣ್ಣ ಉಂಡೆಗಳಂತೆ ಧರೆಗೆ ಅಪ್ಪಳಿಸಿದೆ. ಇದರಿಂದದಾಗಿ ವಡಗೇರಾ ತಾಲೂಕಿನ ಗುಂಡಗುರ್ತಿ, ಗೋಡಿಹಾಳ ಭಾಗದಲ್ಲಿ ಲಕ್ಷಾಂತರ ಬೆಲೆ ಬಾಳುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಮತ್ತೊಂದು ಕಡೆ ಭತ್ತದ ಬೆಳೆ ನೆಲಕ್ಕಚ್ಚಿದೆ.

Advertisement

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದಲ್ಲಿ ಆಲಿಕಲ್ಲು ಮಳೆ ಹಿನ್ನಲೆ ಹಲವೆಡೆ ರೈತರು ಬೆಳೆದ ಅಪಾರ ಪ್ರಮಾಣದ ಪಪ್ಪಾಯಿ ಬೆಳೆ ಹಾನಿಯಾಗಿದೆ. ಶಹಾಪುರದ ಪಟ್ಟಣ ಸುತ್ತ ಮುತ್ತಲಿನಲ್ಲಿ‌ ಭಾರೀ ಪ್ರಮಾಣದ ಆಲಿಕಲ್ಲು ಧರೆಗುರುಳಿದ್ದು, ಕೆಲ ಸಮಯ ಮಿನಿ ಕಾಶ್ಮೀರದಂತೆ ಪರಿವರ್ತನೆಯಾಗಿತ್ತು.

ಬೆನಕನಹಳ್ಳಿಯಲ್ಲಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ಯಾದಗಿರಿ ಜನತೆ ತತ್ತರಿಸಿದ್ದು, ಮತ್ತೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆದ ಬೆಳೆ ರೈತರ ಕೈಗೆ ಬಾರದಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror