ಸುದ್ದಿಗಳು

ಆಲಿಕಲ್ಲು ಮಳೆಗೆ ತತ್ತರಿಸಿದ ರೈತರು | ಮಣ್ಣು ಪಾಲಾದ ಮೆಣಸಿನಕಾಯಿ, ಪಪ್ಪಾಯ, ಭತ್ತದ ಬೆಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ ಬಿಟ್ಟಿದೆ. ಈ ಬಾರಿಯಾದ್ರು ಇಳಿಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಕರಾವಳಿಗೆ ಮೆಣಸು ಏನಿದ್ರು ಉತ್ತರ ಕರ್ನಾಟಕದ ಕಡೆಯಿಂದಲೇ ಬರಬೇಕು. ಅಲ್ಲಿ ಮಳೆ ಬೆಳೆ ಚೆನ್ನಾಗಿ ಆದ್ರೆ ನಮಗೆ ಮೆಣಸಿನ ರೇಟಿನ ಘಾಟು ಸ್ವಲ್ಪ ಕಮ್ಮಿ ಆಗಬಹುದು. ಆದ್ರೆ ಈ ಬಾರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.

Advertisement
Advertisement

ಬಿಸಿಲಿನ ಧಗೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ ಬೇಸಿಗೆ ಆರಂಭದಲ್ಲಿಯೇ ವರುಣ ದೇವ ಭಾರೀ ಅವಾಂತರ ಮಾಡಿದ್ದಾನೆ. ಆಲಿಕಲ್ಲು ಮಳೆಗೆ ಅನ್ನದಾತರು ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಬೃಹತ್ ಗಾತ್ರದ ಆಲಿಕಲ್ಲುಗಳು ಧರೆಗುರುಳಿದ್ದ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ತಡರಾತ್ರಿ ಹಾಗೂ ಬೆಳಗಿನ ಜಾವ ಯಾದಗಿರಿ ಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.ಯಾದಗಿರಿ ನಗರದಲ್ಲಿ ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನಗರದ ರೈಲ್ವೆ ನಿಲ್ದಾಣ ರಸ್ತೆ ಜಲಾವೃತ ಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಹಲವು ಭಾಗದಲ್ಲಿ ಆಲಿಕಲ್ಲು ಮಳೆ ಯಾಗಿದ್ದು ಸಣ್ಣ ಸಣ್ಣ ಉಂಡೆಗಳಂತೆ ಧರೆಗೆ ಅಪ್ಪಳಿಸಿದೆ. ಇದರಿಂದದಾಗಿ ವಡಗೇರಾ ತಾಲೂಕಿನ ಗುಂಡಗುರ್ತಿ, ಗೋಡಿಹಾಳ ಭಾಗದಲ್ಲಿ ಲಕ್ಷಾಂತರ ಬೆಲೆ ಬಾಳುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಮತ್ತೊಂದು ಕಡೆ ಭತ್ತದ ಬೆಳೆ ನೆಲಕ್ಕಚ್ಚಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದಲ್ಲಿ ಆಲಿಕಲ್ಲು ಮಳೆ ಹಿನ್ನಲೆ ಹಲವೆಡೆ ರೈತರು ಬೆಳೆದ ಅಪಾರ ಪ್ರಮಾಣದ ಪಪ್ಪಾಯಿ ಬೆಳೆ ಹಾನಿಯಾಗಿದೆ. ಶಹಾಪುರದ ಪಟ್ಟಣ ಸುತ್ತ ಮುತ್ತಲಿನಲ್ಲಿ‌ ಭಾರೀ ಪ್ರಮಾಣದ ಆಲಿಕಲ್ಲು ಧರೆಗುರುಳಿದ್ದು, ಕೆಲ ಸಮಯ ಮಿನಿ ಕಾಶ್ಮೀರದಂತೆ ಪರಿವರ್ತನೆಯಾಗಿತ್ತು.

Advertisement

ಬೆನಕನಹಳ್ಳಿಯಲ್ಲಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ಯಾದಗಿರಿ ಜನತೆ ತತ್ತರಿಸಿದ್ದು, ಮತ್ತೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆದ ಬೆಳೆ ರೈತರ ಕೈಗೆ ಬಾರದಂತಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

3 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

4 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

4 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

4 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

4 hours ago