Advertisement
ಸುದ್ದಿಗಳು

ಆಲಿಕಲ್ಲು ಮಳೆಗೆ ತತ್ತರಿಸಿದ ರೈತರು | ಮಣ್ಣು ಪಾಲಾದ ಮೆಣಸಿನಕಾಯಿ, ಪಪ್ಪಾಯ, ಭತ್ತದ ಬೆಳೆ |

Share

ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ ಬಿಟ್ಟಿದೆ. ಈ ಬಾರಿಯಾದ್ರು ಇಳಿಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಕರಾವಳಿಗೆ ಮೆಣಸು ಏನಿದ್ರು ಉತ್ತರ ಕರ್ನಾಟಕದ ಕಡೆಯಿಂದಲೇ ಬರಬೇಕು. ಅಲ್ಲಿ ಮಳೆ ಬೆಳೆ ಚೆನ್ನಾಗಿ ಆದ್ರೆ ನಮಗೆ ಮೆಣಸಿನ ರೇಟಿನ ಘಾಟು ಸ್ವಲ್ಪ ಕಮ್ಮಿ ಆಗಬಹುದು. ಆದ್ರೆ ಈ ಬಾರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.

ಬಿಸಿಲಿನ ಧಗೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ ಬೇಸಿಗೆ ಆರಂಭದಲ್ಲಿಯೇ ವರುಣ ದೇವ ಭಾರೀ ಅವಾಂತರ ಮಾಡಿದ್ದಾನೆ. ಆಲಿಕಲ್ಲು ಮಳೆಗೆ ಅನ್ನದಾತರು ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಬೃಹತ್ ಗಾತ್ರದ ಆಲಿಕಲ್ಲುಗಳು ಧರೆಗುರುಳಿದ್ದ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ತಡರಾತ್ರಿ ಹಾಗೂ ಬೆಳಗಿನ ಜಾವ ಯಾದಗಿರಿ ಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.ಯಾದಗಿರಿ ನಗರದಲ್ಲಿ ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನಗರದ ರೈಲ್ವೆ ನಿಲ್ದಾಣ ರಸ್ತೆ ಜಲಾವೃತ ಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಹಲವು ಭಾಗದಲ್ಲಿ ಆಲಿಕಲ್ಲು ಮಳೆ ಯಾಗಿದ್ದು ಸಣ್ಣ ಸಣ್ಣ ಉಂಡೆಗಳಂತೆ ಧರೆಗೆ ಅಪ್ಪಳಿಸಿದೆ. ಇದರಿಂದದಾಗಿ ವಡಗೇರಾ ತಾಲೂಕಿನ ಗುಂಡಗುರ್ತಿ, ಗೋಡಿಹಾಳ ಭಾಗದಲ್ಲಿ ಲಕ್ಷಾಂತರ ಬೆಲೆ ಬಾಳುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಮತ್ತೊಂದು ಕಡೆ ಭತ್ತದ ಬೆಳೆ ನೆಲಕ್ಕಚ್ಚಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದಲ್ಲಿ ಆಲಿಕಲ್ಲು ಮಳೆ ಹಿನ್ನಲೆ ಹಲವೆಡೆ ರೈತರು ಬೆಳೆದ ಅಪಾರ ಪ್ರಮಾಣದ ಪಪ್ಪಾಯಿ ಬೆಳೆ ಹಾನಿಯಾಗಿದೆ. ಶಹಾಪುರದ ಪಟ್ಟಣ ಸುತ್ತ ಮುತ್ತಲಿನಲ್ಲಿ‌ ಭಾರೀ ಪ್ರಮಾಣದ ಆಲಿಕಲ್ಲು ಧರೆಗುರುಳಿದ್ದು, ಕೆಲ ಸಮಯ ಮಿನಿ ಕಾಶ್ಮೀರದಂತೆ ಪರಿವರ್ತನೆಯಾಗಿತ್ತು.

ಬೆನಕನಹಳ್ಳಿಯಲ್ಲಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ಯಾದಗಿರಿ ಜನತೆ ತತ್ತರಿಸಿದ್ದು, ಮತ್ತೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆದ ಬೆಳೆ ರೈತರ ಕೈಗೆ ಬಾರದಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

14 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

15 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

17 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

17 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago