Advertisement
ಸುದ್ದಿಗಳು

ಆಲಿಕಲ್ಲು ಮಳೆಗೆ ತತ್ತರಿಸಿದ ರೈತರು | ಮಣ್ಣು ಪಾಲಾದ ಮೆಣಸಿನಕಾಯಿ, ಪಪ್ಪಾಯ, ಭತ್ತದ ಬೆಳೆ |

Share

ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ ಬಿಟ್ಟಿದೆ. ಈ ಬಾರಿಯಾದ್ರು ಇಳಿಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಕರಾವಳಿಗೆ ಮೆಣಸು ಏನಿದ್ರು ಉತ್ತರ ಕರ್ನಾಟಕದ ಕಡೆಯಿಂದಲೇ ಬರಬೇಕು. ಅಲ್ಲಿ ಮಳೆ ಬೆಳೆ ಚೆನ್ನಾಗಿ ಆದ್ರೆ ನಮಗೆ ಮೆಣಸಿನ ರೇಟಿನ ಘಾಟು ಸ್ವಲ್ಪ ಕಮ್ಮಿ ಆಗಬಹುದು. ಆದ್ರೆ ಈ ಬಾರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.

ಬಿಸಿಲಿನ ಧಗೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ ಬೇಸಿಗೆ ಆರಂಭದಲ್ಲಿಯೇ ವರುಣ ದೇವ ಭಾರೀ ಅವಾಂತರ ಮಾಡಿದ್ದಾನೆ. ಆಲಿಕಲ್ಲು ಮಳೆಗೆ ಅನ್ನದಾತರು ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಬೃಹತ್ ಗಾತ್ರದ ಆಲಿಕಲ್ಲುಗಳು ಧರೆಗುರುಳಿದ್ದ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ತಡರಾತ್ರಿ ಹಾಗೂ ಬೆಳಗಿನ ಜಾವ ಯಾದಗಿರಿ ಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.ಯಾದಗಿರಿ ನಗರದಲ್ಲಿ ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನಗರದ ರೈಲ್ವೆ ನಿಲ್ದಾಣ ರಸ್ತೆ ಜಲಾವೃತ ಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಹಲವು ಭಾಗದಲ್ಲಿ ಆಲಿಕಲ್ಲು ಮಳೆ ಯಾಗಿದ್ದು ಸಣ್ಣ ಸಣ್ಣ ಉಂಡೆಗಳಂತೆ ಧರೆಗೆ ಅಪ್ಪಳಿಸಿದೆ. ಇದರಿಂದದಾಗಿ ವಡಗೇರಾ ತಾಲೂಕಿನ ಗುಂಡಗುರ್ತಿ, ಗೋಡಿಹಾಳ ಭಾಗದಲ್ಲಿ ಲಕ್ಷಾಂತರ ಬೆಲೆ ಬಾಳುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಮತ್ತೊಂದು ಕಡೆ ಭತ್ತದ ಬೆಳೆ ನೆಲಕ್ಕಚ್ಚಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದಲ್ಲಿ ಆಲಿಕಲ್ಲು ಮಳೆ ಹಿನ್ನಲೆ ಹಲವೆಡೆ ರೈತರು ಬೆಳೆದ ಅಪಾರ ಪ್ರಮಾಣದ ಪಪ್ಪಾಯಿ ಬೆಳೆ ಹಾನಿಯಾಗಿದೆ. ಶಹಾಪುರದ ಪಟ್ಟಣ ಸುತ್ತ ಮುತ್ತಲಿನಲ್ಲಿ‌ ಭಾರೀ ಪ್ರಮಾಣದ ಆಲಿಕಲ್ಲು ಧರೆಗುರುಳಿದ್ದು, ಕೆಲ ಸಮಯ ಮಿನಿ ಕಾಶ್ಮೀರದಂತೆ ಪರಿವರ್ತನೆಯಾಗಿತ್ತು.

ಬೆನಕನಹಳ್ಳಿಯಲ್ಲಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ಯಾದಗಿರಿ ಜನತೆ ತತ್ತರಿಸಿದ್ದು, ಮತ್ತೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆದ ಬೆಳೆ ರೈತರ ಕೈಗೆ ಬಾರದಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

5 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

14 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

15 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

19 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago