Advertisement
ಸುದ್ದಿಗಳು

ಆಲಿಕಲ್ಲು ಮಳೆಗೆ ತತ್ತರಿಸಿದ ರೈತರು | ಮಣ್ಣು ಪಾಲಾದ ಮೆಣಸಿನಕಾಯಿ, ಪಪ್ಪಾಯ, ಭತ್ತದ ಬೆಳೆ |

Share

ಕರಾವಳಿ ಜನತೆ ಈಗಾಗಲೇ ಮೆಣಸಿನಕಾಯಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷದಿಂದ ಕೆ.ಜಿಗೆ 400-500 ರಲ್ಲೇ ಮೆಣಸಿಕಾಯಿ ಬೆಲೆ ಇದ್ದು, ಸಂಬಾರು ಭಾರಿ ಖಾರ ಅನ್ನಿಸಿ ಬಿಟ್ಟಿದೆ. ಈ ಬಾರಿಯಾದ್ರು ಇಳಿಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಮತ್ತೆ ನಿರಾಸೆಯಾಗಿದೆ. ಕರಾವಳಿಗೆ ಮೆಣಸು ಏನಿದ್ರು ಉತ್ತರ ಕರ್ನಾಟಕದ ಕಡೆಯಿಂದಲೇ ಬರಬೇಕು. ಅಲ್ಲಿ ಮಳೆ ಬೆಳೆ ಚೆನ್ನಾಗಿ ಆದ್ರೆ ನಮಗೆ ಮೆಣಸಿನ ರೇಟಿನ ಘಾಟು ಸ್ವಲ್ಪ ಕಮ್ಮಿ ಆಗಬಹುದು. ಆದ್ರೆ ಈ ಬಾರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.

ಬಿಸಿಲಿನ ಧಗೆಗೆ ಜನರು ತತ್ತರಿಸಿ ಹೋಗಿದ್ದರು. ಆದರೆ ಬೇಸಿಗೆ ಆರಂಭದಲ್ಲಿಯೇ ವರುಣ ದೇವ ಭಾರೀ ಅವಾಂತರ ಮಾಡಿದ್ದಾನೆ. ಆಲಿಕಲ್ಲು ಮಳೆಗೆ ಅನ್ನದಾತರು ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಬೃಹತ್ ಗಾತ್ರದ ಆಲಿಕಲ್ಲುಗಳು ಧರೆಗುರುಳಿದ್ದ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿದೆ.

ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಹಲವೆಡೆ ವರುಣನ ಆರ್ಭಟ ಶುರುವಾಗಿದೆ. ನಿನ್ನೆ ತಡರಾತ್ರಿ ಹಾಗೂ ಬೆಳಗಿನ ಜಾವ ಯಾದಗಿರಿ ಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.ಯಾದಗಿರಿ ನಗರದಲ್ಲಿ ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿವೆ. ನಗರದ ರೈಲ್ವೆ ನಿಲ್ದಾಣ ರಸ್ತೆ ಜಲಾವೃತ ಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಹಲವು ಭಾಗದಲ್ಲಿ ಆಲಿಕಲ್ಲು ಮಳೆ ಯಾಗಿದ್ದು ಸಣ್ಣ ಸಣ್ಣ ಉಂಡೆಗಳಂತೆ ಧರೆಗೆ ಅಪ್ಪಳಿಸಿದೆ. ಇದರಿಂದದಾಗಿ ವಡಗೇರಾ ತಾಲೂಕಿನ ಗುಂಡಗುರ್ತಿ, ಗೋಡಿಹಾಳ ಭಾಗದಲ್ಲಿ ಲಕ್ಷಾಂತರ ಬೆಲೆ ಬಾಳುವ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಮತ್ತೊಂದು ಕಡೆ ಭತ್ತದ ಬೆಳೆ ನೆಲಕ್ಕಚ್ಚಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದಲ್ಲಿ ಆಲಿಕಲ್ಲು ಮಳೆ ಹಿನ್ನಲೆ ಹಲವೆಡೆ ರೈತರು ಬೆಳೆದ ಅಪಾರ ಪ್ರಮಾಣದ ಪಪ್ಪಾಯಿ ಬೆಳೆ ಹಾನಿಯಾಗಿದೆ. ಶಹಾಪುರದ ಪಟ್ಟಣ ಸುತ್ತ ಮುತ್ತಲಿನಲ್ಲಿ‌ ಭಾರೀ ಪ್ರಮಾಣದ ಆಲಿಕಲ್ಲು ಧರೆಗುರುಳಿದ್ದು, ಕೆಲ ಸಮಯ ಮಿನಿ ಕಾಶ್ಮೀರದಂತೆ ಪರಿವರ್ತನೆಯಾಗಿತ್ತು.

ಬೆನಕನಹಳ್ಳಿಯಲ್ಲಿ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ.ಅಕಾಲಿಕ ಮಳೆಯಿಂದಾಗಿ ಅಕ್ಷರಶಃ ಯಾದಗಿರಿ ಜನತೆ ತತ್ತರಿಸಿದ್ದು, ಮತ್ತೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬೆಳೆದ ಬೆಳೆ ರೈತರ ಕೈಗೆ ಬಾರದಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

24 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago