Advertisement
MIRROR FOCUS

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

Share

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು ಬಡಿದು ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಸಮೀಪದ ಮಲ್ಲಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಭಾಗ್ಯಶ್ರೀ ಮಲ್ಲಪ್ಪ ಪಡೆಪ್ಪನವರ (16) ಮೃತ ಬಾಲಕಿ. ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. 

Advertisement
Advertisement
ಗಡಿ ಜಿಲ್ಲೆಯಲ್ಲಿ ಭರ್ಜರಿ ಮಳೆ: ವಾಹನ ಸವಾರರ ಪರದಾಟ: ಶುಕ್ರವಾರ ಸಂಜೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಭರ್ಜರಿ ಮಳೆಯಾಗಿದ್ದು, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿ ಹರಿದ ಪರಿಣಾಮ ವಾಹನ ಸವಾರರು ಪರದಾಡಿದರು. ಈ ಹೆದ್ದಾರಿಯು ಬೇಗೂರಿನಲ್ಲಿ ಹಾದು ಹೋಗಲಿದ್ದು ಗುಂಡ್ಲುಪೇಟೆ, ಕೇರಳ, ತಮಿಳುನಾಡಿಗೆ ತೆರಳುವವರು ನೀರಿನ ಮಧ್ಯೆ ವಾಹನ ಚಲಾಯಿಸಲು ಪ್ರಯಾಸಪಟ್ಟರು. ಬೇಗೂರು, ಬೆಳಚಲವಾಡಿ ಸುತ್ತಮುತ್ತಲೂ ಕೂಡ ಭರ್ಜರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಂತರ್ಜಲ ಮಟ್ಟ ಹೆಚ್ಚಿ ಕೊಳವೆಬಾವಿಗಳಲ್ಲಿ ಮತ್ತೆ ನೀರಿನ ಸಿಂಚನ ಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ. ಇನ್ನು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ.
ಹನೂರು ತಾಲೂಕಿನಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.‌ ಆದರೆ, ಕೌದಳ್ಳಿ ಗ್ರಾಮದಲ್ಲಿ ಪ್ರತಿ ಮಳೆಯೂ ಅವಾಂತರ ಸೃಷ್ಟಿಸುತ್ತಿದೆ. ಕೌದಳ್ಳಿಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿರದ ಕಾರಣ ನಿನ್ನೆ ಸುರಿದ ಭರ್ಜರಿ ಮಳೆಗೆ ಚರಂಡಿ ತುಂಬಿ ಹೊಳೆಯಂತೆ ಅಂಗಡಿ-‌ಮಳಿಗೆಗಳಿಗೆ ನುಗ್ಗಿ ವ್ಯಾಪಾರಿಗಳನ್ನು ಪರದಾಡುವಂತೆ ಮಾಡಿದೆ.

ಸೊರಬದಲ್ಲಿ ಸಿಡಿಲು ಬಡಿದು ಎತ್ತು ಸಾವು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸೊರಬದ ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಇದರಿಂದ ರೈತನಿಗೆ ಸುಮಾರು 55 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ರಾತ್ರಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಕಾರಟಗಿ ತಾಲ್ಲೂಕಿನಲ್ಲಿ ನೂರಾರು ಮನೆಗಳಿಗೆ ಹಾನಿಯಾಗಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ರಾಮನಗರದಲ್ಲಿ ತೀವ್ರ ಹಾನಿಗೀಡಾದ 14 ಮನೆಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಪರಿಶೀಲಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

4 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

4 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

5 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

5 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

5 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

15 hours ago