ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು ಬಡಿದು ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಸಮೀಪದ ಮಲ್ಲಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಭಾಗ್ಯಶ್ರೀ ಮಲ್ಲಪ್ಪ ಪಡೆಪ್ಪನವರ (16) ಮೃತ ಬಾಲಕಿ. ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಸೊರಬದಲ್ಲಿ ಸಿಡಿಲು ಬಡಿದು ಎತ್ತು ಸಾವು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸೊರಬದ ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಗ್ರಾಮದ ಮಂಜಪ್ಪ ಅವರು ಅಮೃತ್ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಇದರಿಂದ ರೈತನಿಗೆ ಸುಮಾರು 55 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುರುವಾರ ರಾತ್ರಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಕಾರಟಗಿ ತಾಲ್ಲೂಕಿನಲ್ಲಿ ನೂರಾರು ಮನೆಗಳಿಗೆ ಹಾನಿಯಾಗಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ರಾಮನಗರದಲ್ಲಿ ತೀವ್ರ ಹಾನಿಗೀಡಾದ 14 ಮನೆಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಪರಿಶೀಲಿಸಿದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…