ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು ಬಡಿದು ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಸಮೀಪದ ಮಲ್ಲಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಭಾಗ್ಯಶ್ರೀ ಮಲ್ಲಪ್ಪ ಪಡೆಪ್ಪನವರ (16) ಮೃತ ಬಾಲಕಿ. ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ.
ಸೊರಬದಲ್ಲಿ ಸಿಡಿಲು ಬಡಿದು ಎತ್ತು ಸಾವು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸೊರಬದ ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಗ್ರಾಮದ ಮಂಜಪ್ಪ ಅವರು ಅಮೃತ್ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಇದರಿಂದ ರೈತನಿಗೆ ಸುಮಾರು 55 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುರುವಾರ ರಾತ್ರಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಕಾರಟಗಿ ತಾಲ್ಲೂಕಿನಲ್ಲಿ ನೂರಾರು ಮನೆಗಳಿಗೆ ಹಾನಿಯಾಗಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ರಾಮನಗರದಲ್ಲಿ ತೀವ್ರ ಹಾನಿಗೀಡಾದ 14 ಮನೆಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಪರಿಶೀಲಿಸಿದರು.
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…