Advertisement
Opinion

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

Share

ಈ ವರ್ಷ ದೇಶದ ಹಲವೆಡೆ ವಿಚಿತ್ರ ಹವಾಮಾನ ಬದಲಾವಣೆಗಳು ಕಂಡುಬರುತ್ತಿವೆ. ಋತುಚಕ್ರಗಳಲ್ಲಿ ಏರುಪೇರು ಉಂಟಾಗುತ್ತಿದ್ದು, ನಿರೀಕ್ಷಿತ ಸಮಯದಲ್ಲಿ ಮಳೆ ಬರದಿರುವುದು ರೈತ ಸಮುದಾಯವನ್ನು ಆತಂಕಕ್ಕೀಡು ಮಾಡಿದೆ. ಕೆಲವೆಡೆ ಅತಿವೃಷ್ಟಿ, ಮತ್ತೆ ಕೆಲವೆಡೆ ಮಳೆಯ ಕೊರತೆ ಎಂಬ ಪರಿಸ್ಥಿತಿ ಎದುರಾಗುತ್ತಿದೆ.

ತಜ್ಞರ ಪ್ರಕಾರ ಈ ಬಾರಿಯ ಹವಾಮಾನ ಅನಿಶ್ಚಿತತೆಗೆ ಪ್ರಮುಖ ಕಾರಣಗಳಲ್ಲಿ ಒಂದಾದ ‘ಎಲ್ ನೀನೋ’ ಪ್ರಭಾವ ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ಸ್ಪ್ಯಾನಿಷ್ ಭಾಷೆಯಲ್ಲಿ “ದಿ ಕ್ರೈಸ್ಟ್ ಚೈಲ್ಡ್” ಎಂಬ ಅರ್ಥ ಹೊಂದಿರುವ ಎಲ್ ನೀನೋ, ಪೆಸಿಫಿಕ್ ಮಹಾಸಾಗರದ ಮಧ್ಯ ಮತ್ತು ಪೂರ್ವ ಭಾಗದಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗುವ ಸ್ಥಿತಿಯಾಗಿದೆ. ಈ ಸಂದರ್ಭ ಭಾರತದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಮಳೆ ಕೊರತೆ, ಅಧಿಕ ಉಷ್ಣಾಂಶ ಮತ್ತು ಬರದಂತಹ ಪರಿಸ್ಥಿತಿಗಳು ನಿರ್ಮಾಣವಾಗುತ್ತವೆ.

ಇದಕ್ಕೆ ವಿರುದ್ಧವಾಗಿ ‘ಲಾ ನೀನಾ’ ಎಂಬ ಹವಾಮಾನ ಚಕ್ರ ಕಾರ್ಯನಿರ್ವಹಿಸುತ್ತದೆ. ಸ್ಪ್ಯಾನಿಷ್ ಭಾಷೆಯಲ್ಲಿ “ಪುಟ್ಟ ಹುಡುಗಿ” ಎಂಬ ಅರ್ಥ ಹೊಂದಿರುವ ಲಾ ನೀನಾ ಸಂದರ್ಭದಲ್ಲಿ ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ತಂಪಾಗಿರುತ್ತದೆ. ಈ ಪ್ರಕ್ರಿಯೆ ಸಾಮಾನ್ಯವಾಗಿ ಭಾರತದಲ್ಲಿ ಉತ್ತಮ ಮುಂಗಾರು ಹಾಗೂ ಹೆಚ್ಚಿನ ಮಳೆಗೆ ಪೂರಕವಾಗುತ್ತದೆ.

ಈ ರೀತಿಯ ಹವಾಮಾನ ವೈಪರೀತ್ಯಗಳು ಮಾನವ ಸೇರಿದಂತೆ ಎಲ್ಲಾ ಜೀವಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತಿವೆ. ವಿಜ್ಞಾನಿಗಳು ಮತ್ತು ಪರಿಸರ ತಜ್ಞರ ವರದಿಗಳ ಪ್ರಕಾರ, ವೃಕ್ಷನಾಶ, ಸಂಪನ್ಮೂಲಗಳ ಅತಿಯಾದ ದುರ್ಬಳಕೆ, ಪರಿಸರದ ಕಡೆಗಣನೆ ಹಾಗೂ ಅತಿಯಾದ ಉಪಭೋಗದ ಜೀವನಶೈಲಿಯೂ ಈ ಬದಲಾವಣೆಗಳಿಗೆ ಕಾರಣವಾಗಿವೆ.

ನಮಗೆ ದೊರೆಯುವ ಮಳೆನೀರು ಪ್ರಕೃತಿಯ ಅಪರೂಪದ ವರದಾನವಾಗಿದೆ. ಸಾಗರದ ಉಪ್ಪುನೀರು ಆವಿಯಾಗಿ ಮೋಡಗಳಾಗಿ ರೂಪುಗೊಂಡು, ನಂತರ ಸಿಹಿನೀರಾಗಿ ಭೂಮಿಗೆ ಮಳೆಯ ರೂಪದಲ್ಲಿ ಮರಳುತ್ತದೆ. ಈ ಜಲಚಕ್ರವೇ ಭೂಮಿಯ ಮೇಲಿನ ಜೀವಜಗತ್ತಿನ ಅಸ್ತಿತ್ವಕ್ಕೆ ಆಧಾರವಾಗಿದೆ.

ಆದರೆ ಇಂದು ಸುರಿಯುವ ಮಳೆಯ ಬಹುಪಾಲು ನೀರು ಯಾವುದೇ ಸಂಗ್ರಹಣೆಯಿಲ್ಲದೆ ಹರಿದು ಹೋಗುತ್ತಿದೆ. ಮಳೆಯ ನೀರನ್ನು ಭೂಮಿಯೊಳಗೆ ಇಂಗಿಸುವ ಪ್ರಯತ್ನಗಳು ಈಗ ಕಾಲದ ಅಗತ್ಯವಾಗಿವೆ. ಖಾಲಿ ಜಾಗಗಳಲ್ಲಿ 2x2x2 ಅಡಿ ಗಾತ್ರದ ಗುಂಡಿಗಳನ್ನು ತೋಡಿದರೆ ಸುಮಾರು 227 ಲೀಟರ್ ನೀರು ಸಂಗ್ರಹವಾಗಿ ಭೂಮಿಯೊಳಗೆ ಇಂಗಬಹುದು. ಸಾವಿರ ಇಂತಹ ಗುಂಡಿಗಳಲ್ಲಿ ಒಂದೇ ಮಳೆಯಲ್ಲಿ ಸುಮಾರು 2.27 ಲಕ್ಷ ಲೀಟರ್ ನೀರನ್ನು ಭೂಮಿಯೊಳಗೆ ಇಂಗಿಸಲು ಸಾಧ್ಯವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅದೇ ರೀತಿ ರಸ್ತೆ ಬದಿಯ ಚರಂಡಿಗಳು, ಖಾಲಿ ಜಾಗಗಳು, ಪಾಳು ಬಿದ್ದ ಭೂಮಿಗಳು ಹಾಗೂ ಮನೆಗಳ ಮೇಲ್ಛಾವಣಿಯಿಂದ ಹರಿದುಬರುವ ಮಳೆನೀರನ್ನು ಡ್ರಮ್‌ಗಳು ಅಥವಾ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಿ ವಿವಿಧ ಉದ್ದೇಶಗಳಿಗೆ ಬಳಸಬಹುದು. ಇದರಿಂದ ಅಂತರ್ಜಲ ಮಟ್ಟ ಹೆಚ್ಚುವುದರ ಜೊತೆಗೆ ಭವಿಷ್ಯದ ನೀರಿನ ಬಿಕ್ಕಟ್ಟನ್ನು ತಗ್ಗಿಸಲು ಸಹಕಾರಿಯಾಗುತ್ತದೆ.

ಹವಾಮಾನ ಬದಲಾವಣೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಮಳೆನೀರು ಸಂರಕ್ಷಣೆ, ಜಲಮೂಲಗಳ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಇಂದಿನ ನಮ್ಮ ಸಣ್ಣ ಪ್ರಯತ್ನಗಳು ಮುಂದಿನ ಪೀಳಿಗೆಗೆ ದೊಡ್ಡ ಆಶಾಕಿರಣವಾಗಬಹುದು.

ಬರಹ :
ವಸಂತಕುಮಾರ್ ಮೈಸೂರುಮಠ

ನಿವೃತ್ತ ಕೇಂದ್ರ ಸರ್ಕಾರಿ ಅಧಿಕಾರಿ (CAG ಕಚೇರಿ)
ವಿಶ್ವ ಬ್ಯಾಂಕ್ ಪುರಸ್ಕೃತ ಪರಿಸರವಾದಿ

‘ವಸಂತ್ ಮಹಲ್’, ನಂ. 3835/3, 2ನೇ ಅಡ್ಡ ರಸ್ತೆ,
ಉಮರ್ ಖಾಯಂ ರಸ್ತೆ, ತಿಲಕ್ ನಗರ,
ಮೈಸೂರು – 570001

ಮಳೆ ನೀರು ಕೊಯ್ಲು (Rain Water Harvesting) ಕುರಿತು ಯಾವುದೇ ಸಲಹೆ, ಮಾರ್ಗದರ್ಶನ ಅಥವಾ ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಿ:

📞 ವಸಂತಕುಮಾರ್ ಮೈಸೂರುಮಠ, ವಿಶ್ವ ಬ್ಯಾಂಕ್ ಪುರಸ್ಕೃತ ಪರಿಸರವಾದಿ , ಮೊಬೈಲ್: 98459 50440

ವಸಂತಕುಮಾರ್ ಮೈಸೂರುಮಠ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

2 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

7 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

8 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

11 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

16 hours ago