MIRROR FOCUS

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

Advertisement
Advertisement

ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ  ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ  ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

1 hour ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

2 hours ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

2 hours ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

10 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

10 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

12 hours ago