Advertisement
MIRROR FOCUS

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

Share

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ  ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ  ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago