Advertisement
MIRROR FOCUS

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

Share

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.

ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ  ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ  ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

3 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

3 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

7 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

7 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

10 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

19 hours ago