ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ ಅಂತರ್ಜಲ ಮರುಭರ್ತಿ ಹೇಗೆ?. ಇದಕ್ಕಾಗಿ ಅಂತರ್ಜಲ ಮರುಭರ್ತಿ ಮಾಡುವ ವಿವಿಧ ವಿಧಾನಗಳ ಪರಿಚಯ ಮಾಡಲಾಗುತ್ತುದೆ. ಇದರಲ್ಲಿ ಕಂದಕ ಬದು ನಿರ್ಮಾಣವೂ ಒಂದು.ಇದಕ್ಕಾಗಿಯೇ ಮಂಡ್ಯದಲ್ಲಿ ಕಾರ್ಯಾಗಾರ ನಡೆದಿದೆ.ಕಾರ್ಯಾಗಾರದಲ್ಲಿ 3 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಂಡಿದ್ದರು.
ಕೇಂದ್ರ ಗ್ರಾಮಿಣಾಭಿವೃದ್ಧಿ ಮಂತ್ರಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಜ್ಯ ಕೃಷಿ ಇಲಾಖೆ ಸಹಯೋಗದಲ್ಲಿ ಮನ್ರೇಗಾ ಕೃಷಿ ಕವಚ ಕಾರ್ಯಕ್ರಮದಡಿ ಕೃಷಿ ಇಲಾಖೆಯ ಯೋಜನೆಗಳ ಒಗ್ಗೂಡಿತ ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರವನ್ನು ಮಂಡ್ಯದಲ್ಲಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು , ಕೃಷಿ ಕವಚ ಕಾರ್ಯಕ್ರಮದಡಿ ಕಂದಕ ಬದು ನಿರ್ಮಾಣದಿಂದ ಮಳೆ ನೀರು ಪೋಲಾಗುವುದು ತಪ್ಪುತ್ತದೆ. ಪ್ರಸ್ತುತ 104 ತಾಲೂಕಿನಲ್ಲಿ ಮಾತ್ರ ಕೃಷಿ ಹೊಂಡ ಇದ್ದು, ನೀರಾವರಿ ಯೋಜನೆ ಮೂಲಕ 224 ತಾಲೂಕುಗಳಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಇದಕ್ಕಾಗಿ 2 ರಿಂದ 3 ಲಕ್ಷ ರೂಪಾಯಿವರೆಗೂ ಅನುದಾನ ನೀಡಲಾಗುತ್ತದೆ. ಮನ್ರೇಗಾ ಯೋಜನೆಯಡಿ ಸಿಗುವ ಎಲ್ಲಾ ಪ್ರಯೋಜನಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಬೆಲ್ಲದ ನಾಡು ರೈತ ಉತ್ಪಾದಕ ಕಂಪನಿಗಳ ಒಕ್ಕೂಟದ ಅಧ್ಯಕ್ಷ ಕಾರಸವಾಡಿ ಮಹದೇವು ಮಾತನಾಡಿ,ಕಂದಕ ಬದು ನಿರ್ಮಾಣದ ಮೂಲಕ ಮಳೆ ನೀರು ಸಂಗ್ರಹ ಮಾಡಿ ನೀರು ಪೋಲಾಗುವುದನ್ನು ತಪ್ಪಿಸಬಹುದು, ಅಲ್ಲದೆ ಮಣ್ಣಿನ ಸವಕಳಿ ನಿಯಂತ್ರಣ ಕೂಡ ಸಾಧ್ಯ ಎಂದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…