ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

April 19, 2026
7:29 AM
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ. ಯುವಕರನ್ನು ಕೃಷಿಯತ್ತ ಸೆಳೆಯುವ ಪ್ರಯತ್ನವಾಗಿ ಈ ಕಾರ್ಯಕ್ರಮ ಆರಂಭವಾಗಿದೆ.

ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿಯು ವಿಭಿನ್ನ ಹಾಗೂ ವಿನೂತನ ಪ್ರಯತ್ನವಾಗಿ “ರೈತ ರತ್ನ” ರಿಯಾಲಿಟಿ ಶೋ ಕಾರ್ಯಕ್ರಮವನ್ನು ಆರಂಭಿಸಿದೆ. ಕೃಷಿ ಕ್ಷೇತ್ರದ ಸಾಧಕರನ್ನು ಗುರುತಿಸಿ, ಅವರ ಸಾಧನೆಗಳನ್ನು ಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಕಾರ್ಯಕ್ರಮವನ್ನು ದೂರದರ್ಶನ, ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ಇಲಾಖೆ ಸಂಯುಕ್ತವಾಗಿ ಸಂಯುಕ್ತವಾಗಿ ಆಯೋಜಿಸಿವೆ.

ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್  ಅವರು, “ಕೃಷಿಕರು ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ವೇದಿಕೆಯ ಮೂಲಕ ಜನತೆಗೆ ಪರಿಚಯಿಸಲಾಗುತ್ತದೆ. ವಿಶೇಷವಾಗಿ ಯುವಕರನ್ನು ಕೃಷಿಯತ್ತ ಆಕರ್ಷಿಸುವುದು ನಮ್ಮ ಪ್ರಮುಖ ಗುರಿ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಸರಣಿ ಪ್ರಸಾರ ಬಳಿಕ ಅತ್ಯುತ್ತಮ ಸಾಧನೆ ತೋರಿದ ಮೂವರು ಕೃಷಿಕರಿಗೆ “ರೈತ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇದೇ ವೇಳೆ ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥ ಎ. ಹನುಮಂತ್  ಮಾತನಾಡಿ, “ಗ್ರಾಮೀಣ ಸೊಗಡಿನ ಈ ಕಾರ್ಯಕ್ರಮ ದೂರದರ್ಶನ ಚಂದನ ವಾಹಿನಿಯ ಜೊತೆಗೆ ಯೂಟ್ಯೂಬ್‌ನಲ್ಲಿಯೂ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Doordarshan Chandana has launched an innovative reality show titled “Raita Ratna” to recognize and showcase successful farmers and agricultural achievers. The initiative aims to inspire youth to take up agriculture, with top performers being honored with awards.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror