ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿಯು ವಿಭಿನ್ನ ಹಾಗೂ ವಿನೂತನ ಪ್ರಯತ್ನವಾಗಿ “ರೈತ ರತ್ನ” ರಿಯಾಲಿಟಿ ಶೋ ಕಾರ್ಯಕ್ರಮವನ್ನು ಆರಂಭಿಸಿದೆ. ಕೃಷಿ ಕ್ಷೇತ್ರದ ಸಾಧಕರನ್ನು ಗುರುತಿಸಿ, ಅವರ ಸಾಧನೆಗಳನ್ನು ಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ಕಾರ್ಯಕ್ರಮವನ್ನು ದೂರದರ್ಶನ, ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ಇಲಾಖೆ ಸಂಯುಕ್ತವಾಗಿ ಸಂಯುಕ್ತವಾಗಿ ಆಯೋಜಿಸಿವೆ.
ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್ ಅವರು, “ಕೃಷಿಕರು ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ವೇದಿಕೆಯ ಮೂಲಕ ಜನತೆಗೆ ಪರಿಚಯಿಸಲಾಗುತ್ತದೆ. ವಿಶೇಷವಾಗಿ ಯುವಕರನ್ನು ಕೃಷಿಯತ್ತ ಆಕರ್ಷಿಸುವುದು ನಮ್ಮ ಪ್ರಮುಖ ಗುರಿ” ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದ ಸರಣಿ ಪ್ರಸಾರ ಬಳಿಕ ಅತ್ಯುತ್ತಮ ಸಾಧನೆ ತೋರಿದ ಮೂವರು ಕೃಷಿಕರಿಗೆ “ರೈತ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಇದೇ ವೇಳೆ ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥ ಎ. ಹನುಮಂತ್ ಮಾತನಾಡಿ, “ಗ್ರಾಮೀಣ ಸೊಗಡಿನ ಈ ಕಾರ್ಯಕ್ರಮ ದೂರದರ್ಶನ ಚಂದನ ವಾಹಿನಿಯ ಜೊತೆಗೆ ಯೂಟ್ಯೂಬ್ನಲ್ಲಿಯೂ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Doordarshan Chandana has launched an innovative reality show titled “Raita Ratna” to recognize and showcase successful farmers and agricultural achievers. The initiative aims to inspire youth to take up agriculture, with top performers being honored with awards.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…