Advertisement
ಸುದ್ದಿಗಳು

ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |

Share

ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ ಮೂಲಕ ನಡೆಸಲಾಗುತ್ತಿದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಕ್ಯಾಂಪ್ಕೋ  ಸಹಯೋಗದೊಂದಿಗೆ ನಡೆಸಲಾಗುವ 5ನೇ ಕೃಷಿ ಯಂತ್ರಮೇಳದ ರೂಪು ರೇಷೆಯನ್ನು, ಕೃಷಿಕರ ನಿರೀಕ್ಷೆಗಳನ್ನು ಕ್ರೋಢೀಕರಿಸುವ  ಸಲುವಾಗಿ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದರು.  ಕೃಷಿಕರಿಗೆ ಬಳಸುವುದಕ್ಕೆ ಅನುಕೂಲಕರವಾದ ಸಣ್ಣ ಸಣ್ಣ ಯಂತ್ರೋಪಕರಣಗಳ ಲಭ್ಯತೆ ಮತ್ತು ಅದರ ಬಳಕೆಗೆ ಪೂರಕವಾದ ಮಾಹಿತಿಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಐದನೇ ಯಂತ್ರಮೇಳದ ಮೂಲ ಉದ್ದೇಶವೂ ಆಗಿದೆ ಎಂದ ಡಾ.ಕಲ್ಲಡ್ಕ ಪ್ರಭಾಕರ ಭಟ್‌, ದಿನ ದಿನವೂ ಹೊಸ ಹೊಸ ತಂತ್ರಜ್ಞಾನಗಳು ಅಭಿವೃದ್ಧಿಯಾಗುತ್ತಿದೆ ತನ್ಮೂಲಕ ನೂತನ ಯಂತ್ರಗಳ ಆವಿಷ್ಕಾರವಾಗುತ್ತಿದೆ ಇವೆಲ್ಲವನ್ನೂ ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಗರಿಷ್ಟ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ ಬೆಳೆಗಾರರ ಹಿತ ಕಾಪಾಡುವುದಕ್ಕೆ ಕ್ಯಾಂಪ್ಕೋ ಸಂಸ್ಥೆಯು ಬದ್ದವಾಗಿದೆ ಎಂದರು. ಅಡಿಕೆ, ತೆಂಗು, ಬಾಳೆ, ಕಾಳುಮೆಣಸು, ರಬ್ಬರ್ ಮುಂತಾದವಲ್ಲದೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸುವ ಬಗ್ಗೆ ಸಂಸ್ಥೆಯು ಯೋಚಿಸುತ್ತಿದೆ ಎಂದರು. ಸಣ್ಣ ರೈತರಿಗೆ ನೆರವಾಗುವ ಕಡಿಮೆ ವೆಚ್ಚದ ಸಣ್ಣ ಉಪಕರಣಗಳ ಲಭ್ಯತೆಯ ಕೊರತೆಯ ಬಗ್ಗೆ ಅನೇಕ ರೈತರು ಹೇಳಿದ್ದಾರೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.

ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ಕುಮಾರ್.ಎಚ್.ಎಮ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಹ್ಮಣ್ಯ ಭಟ್.ಟಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಂದಿಸಿದರು. ಕಾಲೇಜಿನ ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.

ಸಂವಾದದಲ್ಲಿ ಕೃಷಿಕರ ನಿರೀಕ್ಷೆಗಳು ಹಾಗೂ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು. ಯಂತ್ರ ಮೇಳವನ್ನು ರೈತ ಸ್ನೇಹಿಯಾಗಿ ಹೇಗೆ ಮಾಡಬಹುದು  ಎಂಬುದರ ಬಗ್ಗೆ ಗುಣಮಟ್ಟದ ಚರ್ಚೆ ನಡೆಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago