Advertisement
MIRROR FOCUS

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

Share

ಮಾರ್ಚ್ ತಿಂಗಳಲ್ಲಿ ಅಪರೂಪವಾಗಿ ಕಾಣುವ ಹವಾಮಾನ ಬದಲಾವಣೆ ದೇಶದ ವಿವಿದೆಡೆ ಉತ್ತಮ ಮಳೆಯಾಗಿದೆ.  ಮಾರ್ಚ್ ತಿಂಗಳಲ್ಲಿ ಇಷ್ಟು ದೊಡ್ಡ ಮಟ್ಟದ ಮಳೆ ಮತ್ತು ಆಲಿಕಲ್ಲು ಮಳೆ ಸಂಭವಿಸಿರುವುದು ಹವಾಮಾನ ಅಸ್ಥಿರತೆಯ ಸೂಚಕವಾಗಿದೆ. ರೈತರ ಬೆಳೆ ಹಾಗೂ ಆದಾಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಶೇಷವಾಗಿ ಗುಜರಾತ್‌ನ ರಾಜ್ಕೋಟ್‌ನಲ್ಲಿ  ಮಳೆ ಭಾರೀ ಅಬ್ಬರ ತೋರಿದ್ದು, ಕೆಲವೇ ಗಂಟೆಗಳಲ್ಲಿ 38 ಮಿಮೀ ಮಳೆ ದಾಖಲಾಗಿದ್ದು, ಇದು ಮಾರ್ಚ್ ತಿಂಗಳ ಇತಿಹಾಸದಲ್ಲೇ ಅತಿ ಹೆಚ್ಚು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಈ ತಿಂಗಳಲ್ಲಿ ಕೇವಲ 0.1 ಮಿಮೀ ಮಳೆಯಷ್ಟೇ ಆಗುತ್ತದೆ. ಹಿಂದಿನ 15 ವರ್ಷಗಳಲ್ಲಿ ಬಹುತೇಕ ವರ್ಷಗಳಲ್ಲಿ ಮಳೆಯೇ ಆಗದ ಪ್ರದೇಶದಲ್ಲಿ ಇಷ್ಟು ಭಾರೀ ಮಳೆ ಸಂಭವಿಸಿದ್ದು ಅಪರೂಪದ ಘಟನೆ ಎಂದು ತಜ್ಞರು ಹೇಳಿದ್ದಾರೆ ಎಂದು ಖಾಸಗಿ ಹವಾಮಾನ ಸಂಸ್ಥೆ  ಸ್ಕೈಮೆಟ್‌ ಹೇಳಿದೆ.

ಈ ಅಸಾಮಾನ್ಯ ಹವಾಮಾನಕ್ಕೆ ಪ್ರಮುಖ ಕಾರಣಗಳನ್ನು ಕೂಡಾ ತಜ್ಞರು ಹೇಳಿದ್ದಾರೆ. ಪಶ್ಚಿಮ ವ್ಯತ್ಯಯ (Western Disturbance), ಚಕ್ರವಾತೀಯ ಸಂಚಲನ,  ಮೇಲ್ಮಟ್ಟದ ಟ್ರಫ್‌ ವ್ಯವಸ್ಥೆ ಹಾಗೂ ಅರೇಬಿಯನ್ ಸಮುದ್ರದಿಂದ ತೇವಾಂಶ ಹರಿವು  ಈ ಎಲ್ಲಾ ವ್ಯವಸ್ಥೆಗಳು ಒಂದೇ ವೇಳೆ ಕಾರ್ಯನಿರ್ವಹಿಸಿದ ಪರಿಣಾಮ ಗುಡುಗು, ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆ ಸೇರಿ ತೀವ್ರ ಹವಾಮಾನ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಕೈಮೆಟ್‌ ಹೇಳಿದೆ.

ಈ ಅಕಾಲಿಕ ಮಳೆ ಪರಿಣಾಮ, ಬೆಳೆ ಹಾನಿ (ಗೋಧಿ, ಕಡಲೆ, ಜೀರಿಗೆ ಮುಂತಾದವು) , ಕೊಯ್ಲಿಗೆ ಬಂದ ಬೆಳೆಗಳಿಗೆ ನಷ್ಟ, ಮಾರುಕಟ್ಟೆ ಸರಬರಾಜು ವ್ಯತ್ಯಯ ಹಾಗೂ  ಗುಣಮಟ್ಟ ಸಮಸ್ಯೆ ಕಂಡುಬರಬಹುದು ಎಂದು ವರದಿಗಳು ತಿಳಿಸಿವೆ.

ಹವಾಮಾನ ತಜ್ಞರ ಪ್ರಕಾರ, ಇದೇ ರೀತಿಯ ಮತ್ತೊಂದು ವ್ಯವಸ್ಥೆ ಈಗ ಮಧ್ಯಪ್ರಾಚ್ಯ ಭಾಗದಲ್ಲಿ ರೂಪಗೊಂಡಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೆ ಇದೇ ರೀತಿಯ ಹವಾಮಾನ ಸಂಭವಿಸುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An unusual weather event struck Rajkot with heavy rain, strong winds and hailstorm, recording a historic 38 mm rainfall in March. The rare phenomenon may impact crops and agriculture, raising concerns among farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

12 hours ago

ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಒಳನಾಡಿನ…

18 hours ago

ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ

ಪುತ್ತೂರಿನ DCR ಸಂಸ್ಥೆ ಗೇರುಹಣ್ಣು ಮೌಲ್ಯವರ್ಧನೆ ಕುರಿತು ಉಚಿತ CA-VA ತರಬೇತಿ ನೀಡುತ್ತಿದೆ.…

1 day ago

ಹೆಚ್ಚುತ್ತಿರುವ ಉಷ್ಣತೆ ಕೃಷಿಗೆ ದೊಡ್ಡ ಸಂಕಷ್ಟ | ಉತ್ಪಾದನೆ ಕುಸಿತದ ಭೀತಿ

ಹವಾಮಾನ ಬದಲಾವಣೆಯಿಂದ ಉಷ್ಣತೆ ಏರಿಕೆ ಕೃಷಿ ಉತ್ಪಾದನೆಗೆ ಗಂಭೀರ ಸವಾಲಾಗಿ ಪರಿಣಮಿಸಿದೆ. ರಬಿ…

1 day ago

ಏಷ್ಯಾ ರಬ್ಬರ್ ಬೆಲೆ ಕುಸಿತ – ರಬ್ಬರ್‌ ಇಳುವರಿ ಹಾಗೂ ಸರಬರಾಜು ಭೀತಿ ಕಡಿಮೆಯಾದ ಕಾರಣ ಮಾರುಕಟ್ಟೆ ಕುಸಿತ..!

ಪೀಕ್‌ ಹಾರ್ವೆಸ್ಟ್‌ ನಿರೀಕ್ಷೆಯಿಂದ ಏಷ್ಯಾದಲ್ಲಿ ರಬ್ಬರ್ ಬೆಲೆ ಇಳಿಕೆ. ವಾಹನ ಉದ್ಯಮ ಬೇಡಿಕೆ…

1 day ago