Advertisement
MIRROR FOCUS

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

Share

ಮಾರ್ಚ್ ತಿಂಗಳಲ್ಲಿ ಅಪರೂಪವಾಗಿ ಕಾಣುವ ಹವಾಮಾನ ಬದಲಾವಣೆ ದೇಶದ ವಿವಿದೆಡೆ ಉತ್ತಮ ಮಳೆಯಾಗಿದೆ.  ಮಾರ್ಚ್ ತಿಂಗಳಲ್ಲಿ ಇಷ್ಟು ದೊಡ್ಡ ಮಟ್ಟದ ಮಳೆ ಮತ್ತು ಆಲಿಕಲ್ಲು ಮಳೆ ಸಂಭವಿಸಿರುವುದು ಹವಾಮಾನ ಅಸ್ಥಿರತೆಯ ಸೂಚಕವಾಗಿದೆ. ರೈತರ ಬೆಳೆ ಹಾಗೂ ಆದಾಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಶೇಷವಾಗಿ ಗುಜರಾತ್‌ನ ರಾಜ್ಕೋಟ್‌ನಲ್ಲಿ  ಮಳೆ ಭಾರೀ ಅಬ್ಬರ ತೋರಿದ್ದು, ಕೆಲವೇ ಗಂಟೆಗಳಲ್ಲಿ 38 ಮಿಮೀ ಮಳೆ ದಾಖಲಾಗಿದ್ದು, ಇದು ಮಾರ್ಚ್ ತಿಂಗಳ ಇತಿಹಾಸದಲ್ಲೇ ಅತಿ ಹೆಚ್ಚು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಈ ತಿಂಗಳಲ್ಲಿ ಕೇವಲ 0.1 ಮಿಮೀ ಮಳೆಯಷ್ಟೇ ಆಗುತ್ತದೆ. ಹಿಂದಿನ 15 ವರ್ಷಗಳಲ್ಲಿ ಬಹುತೇಕ ವರ್ಷಗಳಲ್ಲಿ ಮಳೆಯೇ ಆಗದ ಪ್ರದೇಶದಲ್ಲಿ ಇಷ್ಟು ಭಾರೀ ಮಳೆ ಸಂಭವಿಸಿದ್ದು ಅಪರೂಪದ ಘಟನೆ ಎಂದು ತಜ್ಞರು ಹೇಳಿದ್ದಾರೆ ಎಂದು ಖಾಸಗಿ ಹವಾಮಾನ ಸಂಸ್ಥೆ  ಸ್ಕೈಮೆಟ್‌ ಹೇಳಿದೆ.

ಈ ಅಸಾಮಾನ್ಯ ಹವಾಮಾನಕ್ಕೆ ಪ್ರಮುಖ ಕಾರಣಗಳನ್ನು ಕೂಡಾ ತಜ್ಞರು ಹೇಳಿದ್ದಾರೆ. ಪಶ್ಚಿಮ ವ್ಯತ್ಯಯ (Western Disturbance), ಚಕ್ರವಾತೀಯ ಸಂಚಲನ,  ಮೇಲ್ಮಟ್ಟದ ಟ್ರಫ್‌ ವ್ಯವಸ್ಥೆ ಹಾಗೂ ಅರೇಬಿಯನ್ ಸಮುದ್ರದಿಂದ ತೇವಾಂಶ ಹರಿವು  ಈ ಎಲ್ಲಾ ವ್ಯವಸ್ಥೆಗಳು ಒಂದೇ ವೇಳೆ ಕಾರ್ಯನಿರ್ವಹಿಸಿದ ಪರಿಣಾಮ ಗುಡುಗು, ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆ ಸೇರಿ ತೀವ್ರ ಹವಾಮಾನ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಕೈಮೆಟ್‌ ಹೇಳಿದೆ.

ಈ ಅಕಾಲಿಕ ಮಳೆ ಪರಿಣಾಮ, ಬೆಳೆ ಹಾನಿ (ಗೋಧಿ, ಕಡಲೆ, ಜೀರಿಗೆ ಮುಂತಾದವು) , ಕೊಯ್ಲಿಗೆ ಬಂದ ಬೆಳೆಗಳಿಗೆ ನಷ್ಟ, ಮಾರುಕಟ್ಟೆ ಸರಬರಾಜು ವ್ಯತ್ಯಯ ಹಾಗೂ  ಗುಣಮಟ್ಟ ಸಮಸ್ಯೆ ಕಂಡುಬರಬಹುದು ಎಂದು ವರದಿಗಳು ತಿಳಿಸಿವೆ.

ಹವಾಮಾನ ತಜ್ಞರ ಪ್ರಕಾರ, ಇದೇ ರೀತಿಯ ಮತ್ತೊಂದು ವ್ಯವಸ್ಥೆ ಈಗ ಮಧ್ಯಪ್ರಾಚ್ಯ ಭಾಗದಲ್ಲಿ ರೂಪಗೊಂಡಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೆ ಇದೇ ರೀತಿಯ ಹವಾಮಾನ ಸಂಭವಿಸುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An unusual weather event struck Rajkot with heavy rain, strong winds and hailstorm, recording a historic 38 mm rainfall in March. The rare phenomenon may impact crops and agriculture, raising concerns among farmers.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

6 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

11 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

17 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago