Advertisement
MIRROR FOCUS

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

Share

ಮಾರ್ಚ್ ತಿಂಗಳಲ್ಲಿ ಅಪರೂಪವಾಗಿ ಕಾಣುವ ಹವಾಮಾನ ಬದಲಾವಣೆ ದೇಶದ ವಿವಿದೆಡೆ ಉತ್ತಮ ಮಳೆಯಾಗಿದೆ.  ಮಾರ್ಚ್ ತಿಂಗಳಲ್ಲಿ ಇಷ್ಟು ದೊಡ್ಡ ಮಟ್ಟದ ಮಳೆ ಮತ್ತು ಆಲಿಕಲ್ಲು ಮಳೆ ಸಂಭವಿಸಿರುವುದು ಹವಾಮಾನ ಅಸ್ಥಿರತೆಯ ಸೂಚಕವಾಗಿದೆ. ರೈತರ ಬೆಳೆ ಹಾಗೂ ಆದಾಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಶೇಷವಾಗಿ ಗುಜರಾತ್‌ನ ರಾಜ್ಕೋಟ್‌ನಲ್ಲಿ  ಮಳೆ ಭಾರೀ ಅಬ್ಬರ ತೋರಿದ್ದು, ಕೆಲವೇ ಗಂಟೆಗಳಲ್ಲಿ 38 ಮಿಮೀ ಮಳೆ ದಾಖಲಾಗಿದ್ದು, ಇದು ಮಾರ್ಚ್ ತಿಂಗಳ ಇತಿಹಾಸದಲ್ಲೇ ಅತಿ ಹೆಚ್ಚು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಈ ತಿಂಗಳಲ್ಲಿ ಕೇವಲ 0.1 ಮಿಮೀ ಮಳೆಯಷ್ಟೇ ಆಗುತ್ತದೆ. ಹಿಂದಿನ 15 ವರ್ಷಗಳಲ್ಲಿ ಬಹುತೇಕ ವರ್ಷಗಳಲ್ಲಿ ಮಳೆಯೇ ಆಗದ ಪ್ರದೇಶದಲ್ಲಿ ಇಷ್ಟು ಭಾರೀ ಮಳೆ ಸಂಭವಿಸಿದ್ದು ಅಪರೂಪದ ಘಟನೆ ಎಂದು ತಜ್ಞರು ಹೇಳಿದ್ದಾರೆ ಎಂದು ಖಾಸಗಿ ಹವಾಮಾನ ಸಂಸ್ಥೆ  ಸ್ಕೈಮೆಟ್‌ ಹೇಳಿದೆ.

ಈ ಅಸಾಮಾನ್ಯ ಹವಾಮಾನಕ್ಕೆ ಪ್ರಮುಖ ಕಾರಣಗಳನ್ನು ಕೂಡಾ ತಜ್ಞರು ಹೇಳಿದ್ದಾರೆ. ಪಶ್ಚಿಮ ವ್ಯತ್ಯಯ (Western Disturbance), ಚಕ್ರವಾತೀಯ ಸಂಚಲನ,  ಮೇಲ್ಮಟ್ಟದ ಟ್ರಫ್‌ ವ್ಯವಸ್ಥೆ ಹಾಗೂ ಅರೇಬಿಯನ್ ಸಮುದ್ರದಿಂದ ತೇವಾಂಶ ಹರಿವು  ಈ ಎಲ್ಲಾ ವ್ಯವಸ್ಥೆಗಳು ಒಂದೇ ವೇಳೆ ಕಾರ್ಯನಿರ್ವಹಿಸಿದ ಪರಿಣಾಮ ಗುಡುಗು, ಗಾಳಿ, ಮಳೆ ಮತ್ತು ಆಲಿಕಲ್ಲು ಮಳೆ ಸೇರಿ ತೀವ್ರ ಹವಾಮಾನ ಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಕೈಮೆಟ್‌ ಹೇಳಿದೆ.

ಈ ಅಕಾಲಿಕ ಮಳೆ ಪರಿಣಾಮ, ಬೆಳೆ ಹಾನಿ (ಗೋಧಿ, ಕಡಲೆ, ಜೀರಿಗೆ ಮುಂತಾದವು) , ಕೊಯ್ಲಿಗೆ ಬಂದ ಬೆಳೆಗಳಿಗೆ ನಷ್ಟ, ಮಾರುಕಟ್ಟೆ ಸರಬರಾಜು ವ್ಯತ್ಯಯ ಹಾಗೂ  ಗುಣಮಟ್ಟ ಸಮಸ್ಯೆ ಕಂಡುಬರಬಹುದು ಎಂದು ವರದಿಗಳು ತಿಳಿಸಿವೆ.

ಹವಾಮಾನ ತಜ್ಞರ ಪ್ರಕಾರ, ಇದೇ ರೀತಿಯ ಮತ್ತೊಂದು ವ್ಯವಸ್ಥೆ ಈಗ ಮಧ್ಯಪ್ರಾಚ್ಯ ಭಾಗದಲ್ಲಿ ರೂಪಗೊಂಡಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೆ ಇದೇ ರೀತಿಯ ಹವಾಮಾನ ಸಂಭವಿಸುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An unusual weather event struck Rajkot with heavy rain, strong winds and hailstorm, recording a historic 38 mm rainfall in March. The rare phenomenon may impact crops and agriculture, raising concerns among farmers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago