Advertisement
ರಾಷ್ಟ್ರೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ತಂಡ |

Share

ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. 

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ   ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ , ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ. ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಹಾಗೂ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆಯಲ್ಲಿ  ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್,  ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು ಇದ್ದರು.ಮಸಿ ಬಳಿದ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದೆ. ರಾಜ್ಯಕ್ಕೆ ಆಗಮಿಸಿದ ರೈತ ನಾಯಕನಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ರೈತ  ಹೋರಾಟ ನಿಲ್ಲಿಸಲು 3 ಸಾವಿರ ಕೋಟಿ ಕೇಳಿದ ಡೀಲ್‌ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಇದೇ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡಲು ಬೆಂಗಳೂರಿನತ್ತ ರಾಷ್ಟ್ರೀಯ ರೈತ ನಾಯಕರು ಆಗಮಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

3 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

8 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

19 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

24 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago