ರಕ್ಷಾಬಂಧನ ಎನ್ನುವುದು ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.
ಅನೇಕ ಸಮಯಗಳಿಂದ ಈ ಭಾಗದ ಜನರು ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…