Advertisement
MIRROR FOCUS

ರಕ್ಷಾಬಂಧನ – ಗ್ರಾಮೀಣ ಅಭಿವೃದ್ದಿಯ ದೀಕ್ಷೆ | ಮಂಡೆಕೋಲಿನಲ್ಲಿ ವಿನೂತನ ರೀತಿಯಲ್ಲಿ ರಕ್ಷಾಬಂಧನ |

Share

ರಕ್ಷಾಬಂಧನ ಎನ್ನುವುದು  ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ  ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು  ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು. 

Advertisement
Advertisement

 

ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್‌ ಹಾಗೂ ಸ್ಥಳೀಯ  ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು  ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.

ಅನೇಕ ಸಮಯಗಳಿಂದ ಈ ಭಾಗದ ಜನರು  ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್‌ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು  ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago