ರಕ್ಷಾಬಂಧನ ಎನ್ನುವುದು ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.
ಅನೇಕ ಸಮಯಗಳಿಂದ ಈ ಭಾಗದ ಜನರು ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…