ರಕ್ಷಾಬಂಧನ ಎನ್ನುವುದು ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.
ಅನೇಕ ಸಮಯಗಳಿಂದ ಈ ಭಾಗದ ಜನರು ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…