ರಕ್ಷಾಬಂಧನ ಎನ್ನುವುದು ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.
ಅನೇಕ ಸಮಯಗಳಿಂದ ಈ ಭಾಗದ ಜನರು ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…