ರಕ್ಷಾಬಂಧನ ಎನ್ನುವುದು ಪ್ರೀತಿಯ ಸಂಕೇತವೂ ಹೌದು ರಕ್ಷಣೆಯ ಸಂಕೇತವೂ ಹೌದು. ಹಿಂದೆಲ್ಲಾ ಯುದ್ಧಕ್ಕೆ ತೆರಳುವ ವೇಳೆ ರಕ್ಷಣೆ ಹಾಗೂ ಗೆಲುವಿಗಾಗಿ ರಕ್ಷೆ ತೊಟ್ಟು ಮುನ್ನುಗ್ಗಿದ ಬಗ್ಗೆಯೂ ಪುರಾಣಗಳಲ್ಲಿ ತಿಳಿದರೆ, ಈಚೆಗೆ ಪ್ರೀತಿ, ಸ್ನೇಹ, ಸಹೋದರತ್ವದ ಉದ್ದೇಶದಿಂದಲೂ ರಕ್ಷಾಬಂಧನ ಆಚರಿಸಲಾಗುತ್ತಿದೆ. ಆದರೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ರಕ್ಷಾ ಬಂಧನವನ್ನು ರಸ್ತೆ ದುರಸ್ತಿಯ ಜೊತೆಗೆ ಆಚರಿಸಿದರು.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಬೊಳುಗಲ್ಲು – ಬೇಂಗತ್ತಮಲೆ- ಚಾಕೊಟೆ ರಸ್ತೆಯನ್ನು ಅಲ್ಲಿನ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಗ್ರಾ ಪಂ ಸದಸ್ಯರ ಸಹಕಾರದೊಂದಿಗೆ ಆ ಪ್ರದೇಶದ ಜನರ ಮೂಲಕ ದುರಸ್ತಿ ಮಾಡಲಾಯಿತು. ಅದರ ಜೊತೆಗೆ ರಕ್ಷಾಬಂಧನವನ್ನು ರಸ್ತೆಯಲ್ಲಿಯೇ ಕುಳಿತು ಆಚರಿಸಲಾಯಿತು. ಈ ಮೂಲಕ ರಸ್ತೆಯ ರಕ್ಷಣೆಯೂ ನಮ್ಮ ಜವಾಬ್ದಾರಿ ಎಂಬುದನ್ನು ಈ ಜನರು ಸಾಬೀತು ಮಾಡಿದರು. ಇದು ನಾಡಿನೆಲ್ಲೆಡೆಗೆ ಧನಾತ್ಮಕ ಸಂದೇಶ ಬೀರಿತು.
ಅನೇಕ ಸಮಯಗಳಿಂದ ಈ ಭಾಗದ ಜನರು ಈ ಗ್ರಾಮೀಣ ರಸ್ತೆ ದುರಸ್ತಿಯ ಬೇಡಿಕೆ ಇರಿಸಿದ್ದರು. ಅನುದಾನಗಳ ಕೊರತೆಯಿಂದ ಸಂಪೂರ್ಣ ದುರಸ್ತಿ ಆಗಿರಲಿಲ್ಲ. ಸಣ್ಣಪುಟ್ಟ ಕಾಂಕ್ರೀಟ್ ಕಾಮಗಾರಿಗಳಿಂದಲೇ ತೃಪ್ತಿ ಹೊಂದಬೇಕಾಗಿತ್ತು. ಹೀಗಾಗಿ ತಮ್ಮ ರಸ್ತೆಯ ರಕ್ಷಣೆಯನ್ನು ಗ್ರಾಪಂ ಸಹಕಾರದ ಮೂಲಕ ಈ ಬಾರಿ ಅಲ್ಲಿನ ಜನರೇ ವಹಿಸಿಕೊಂಡರು.
ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…
ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…
ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…
ಕಾಳುಮೆಣಸಿನ ಧಾರಣೆ ಏರಿಕೆಯಾಗಿದೆ. ಸದ್ಯ 615 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ.
ರಬ್ಬರ್ ಆಮದು ತಡೆಯಾದರೆ ಟಯರ್ ಉದ್ಯಮ ಹಾಗೂ ರಬ್ಬರ್ ಬೆಳೆಗಾರರ ರಕ್ಷಣೆ ಸಾಧ್ಯವಿದೆ…