Advertisement
ವಿಶೇಷ ವರದಿಗಳು

#CoconutShell | ತೆಂಗಿನ ಗೆರಟೆಯಿಂದ ರಕ್ಷಾಬಂಧನ | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಪುತ್ತೂರಿನ ಕೋಡಿಂಬಾಡಿಯಲ್ಲಿ ಮಹಿಳೆಯರ ಪ್ರಯತ್ನ |

Share

ತೆಂಗಿನಕಾಯಿಯ ಗೆರಟೆಯಿಂದ ರಕ್ಷಾಬಂಧನ RakshaBandhan ತಯಾರಿಕೆಯ ಪ್ರಯತ್ನ ನಡೆಯುತ್ತಿದೆ. ಈ ಹೆಜ್ಜೆಯಲ್ಲಿ ಮಹಿಳೆಯರು ಯಶಸ್ಸು ಕಾಣುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೋಡಿಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೆಂಗಿನ ಕಾಯಿಯ ಗೆರಟೆಯ ಮೂಲಕ ವಿವಿಧ ವಸ್ತುಗಳನ್ನು ತಯಾರಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಸದಸ್ಯರು ಈಗ ತೆಂಗಿನಕಾಯಿಯ ಗೆರಟೆಯ ಮೂಲಕ ಕಲಾಕೃತಿ ರಚನೆಯ ಮೂಲಕ ಈಗಾಗಲೇ ಸುದ್ದಿಯಾಗಿದ್ದಾರೆ.  ಸುಮಾರು ಮಂದಿ ಮಹಿಳೆಯರು ಗೆರಟೆಯಿಂದ ಮಾಡಬಹುದಾದ ಕಲಾಕೃತಿಗಳ ಬಗ್ಗೆ ತರಬೇತಿ ಪಡೆದಿದ್ದಾರೆ. ತೆಂಗಿನ ಮೌಲ್ಯವರ್ಧನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಮಹಿಳಾ ಆರ್ಥಿಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೇ ಹಲವು ಉತ್ಪನ್ನಗಳನ್ನು ತಯಾರು ಮಾಡಿದ್ದಾರೆ. ಇದೀಗ ರಕ್ಷಾಬಂಧನದ ಪ್ರಯುಕ್ತ ತೆಂಗಿನ ಗೆರಟೆಯಿಂದ ರಕ್ಷಾಬಂಧನವನ್ನು ತಯಾರಿಸುತ್ತಿದ್ದಾರೆ.

ನಬಾರ್ಡ್ ದಕ್ಷಿಣ ಕನ್ನಡ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ,  ಸಂಜೀವಿನಿ ಒಕ್ಕೂಟ ಹಾಗೂ ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ತರಬೇತಿ ನೀಡಲಾಗಿತ್ತು. ತೆಂಗಿನ ಗೆರಟೆಯ ಮೂಲಕ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ತರಬೇತಿ ನೀಡಲಾಗಿದೆ. ಕೋಡಿಂಬಾಡಿಯ ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಮಹಿಳೆಯರು  ಫೆಬ್ರವರಿ ತಿಂಗಳಲ್ಲಿ ತರಬೇತಿ ಪಡೆದಿದ್ದು, ಒಟ್ಟು ಮೂರು ತಂಡಗಳಾಗಿ ವಿಂಗಡಿಸಲಾಗಿದೆ. ಮೂರೂ ತಂಡಗಳಿಗೆ ಪಾಲಿಶ್ ಮತ್ತು ಕಟಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಪರಿಣತಿ ಇದೆ.ಈಗ ಗಟ್ಟಿಮುಟ್ಟಾದ ಕೀಚೈನ್‌, ಅಡುಗೆ ಮನೆಗೆ ಬೇಕಾದ ಪಾತ್ರೆಗಳು, ಕಪ್‌, ಸ್ಮರಣಿಕೆ ಇತ್ಯಾದಿ ಮಾಡಿದ್ದಾರೆ. ಈ ಬಾರಿ ತ್ರಿವರ್ಣದ ಬ್ಯಾಡ್‌ ಕೂಡ ತಯಾರಿಸಿದ್ದಾರೆ. ಮಹಿಳಾ ತಂಡದ ಕೆಲಸಗಳು ಹೆಚ್ಚು ಗಮನ ಸೆಳೆದಿದೆ.

ಈ ತಂಡದಲ್ಲಿ 30 ಮಂದಿ ಮಹಿಳೆಯರು 3 ತಂಡಗಳಾಗಿ ಕೆಲಸ ಮಾಡುತ್ತಿದ್ದಾರೆ. ಜನನಿ, ಅಕ್ಷಯ ಹಾಗೂ ಜ್ಞಾನ ಸಂಜೀವಿನಿ ಘಟಕಗಳಾಗಿ ಕೆಲಸ ಆರಂಭಿಸಿದ್ದಾರೆ. ಕೆಲವರು ಮನೆಗಳಲ್ಲಿ ಹಾಗೂ ಕೋಡಿಂಬಾಡಿ ಗ್ರಾಪಂ ನೀಡಿರುವ ಕಟ್ಟದಲ್ಲಿ ಕೆಲಸ ಮಾಡುತ್ತಾರೆ. ಕಳೆದ 3 ತಿಂಗಳಿನಿಂದ ಕೆಲಸ ಮಾಡುತ್ತಿರುವ ಮಹಿಳೆಯರು ಪ್ಲಾಸ್ಟಿಕ್‌ ಬಳಸದೆಯೇ ಹಲವು ಉತ್ಪನ್ನಗಳನ್ನು ತಯಾರು ಮಾಡುವಷ್ಟು ಕುಶಲತೆಯನ್ನು ಈಗ ಪಡೆದಿದ್ದಾರೆ. ಸದ್ಯ ಸಂಜೀವಿನಿ ಒಕ್ಕೂಟವು ಸದಸ್ಯರು ತಯಾರಿಸಿರುವ ಉತ್ಪನ್ನಗಳ ಮಾರಾಟವನ್ನೂ ಮಾಡುತ್ತಿದ್ದಾರೆ.

ತಮ್ಮ ಬಿಡುವಿನ ವೇಳೆ ಮಹಿಳೆಯರು ಮನೆಯಲ್ಲಿಯೇ ವಿವಿಧ ಕರಕುಶಲ ವಸ್ತುಗಳನ್ನು ತಯಾರು ಮಾಡುತ್ತಿದ್ದಾರೆ. ಮನೆಯಲ್ಲಿಯೇ ಇರುವ ಆದರೆ ಎಸೆದು ವ್ಯರ್ಥವಾಗುವ ವಸ್ತುಗಳು ಈಗ ಕಲಾತ್ಮಕವಾಗಿ ಮಾರುಕಟ್ಟೆಗೆ ತಲುಪು ಸಾಧ್ಯವಾಗಿದೆ. ಸದ್ಯ ಮಹಿಳೆಯರು ಆನ್‌ ಲೈನ್‌ ಹಾಗೂ ಪರಿಚಯಸ್ಥರ ಮೂಲಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ.  ಮುಂದೆ ಗ್ರಾಮೀಣ ಸಂತೆಯ ಮೂಲಕ ಮಹಿಳೆಯರು ಇಂತಹ ವಸ್ತುಗಳ ಮಾರಾಟ ಮಾಡಲು ಸಾಧ್ಯವಿದೆ. ತೆಂಗಿನ ಗೆರಟೆಯ ಉತ್ಪನ್ನಗಳನ್ನು ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯು ಮಾರುಕಟ್ಟೆ ವ್ಯವಸ್ಥೆ ಮಾಡುವುದಾಗಿ ಹೇಳಿದೆ. ಹೀಗಾಗಿ ಮಹಿಳೆಯರಿಗೆ ಮಾರುಕಟ್ಟೆ ವ್ಯವಸ್ಥೆಯೂ ಲಭ್ಯವಾದರೆ ಗ್ರಾಮೀಣ ಆರ್ಥಿಕತೆಯ ಮೇಲೆ ಹೆಚ್ಚಿನ ಪರಿಣಾಮ ಬೀರಬಹುದಾಗಿದೆ.

ಮಹಿಳಾ ಸ್ವಾವಲಂಬನೆಯ ಮೂಲಕ ಗ್ರಾಮೀಣ ಭಾಗದಲ್ಲೂ ಹೆಚ್ಚು ಚಟುವಟಿಕೆ ಆರಂಭವಾಗಲು ಮತ್ತು ಈ ಮೂಲಕ ಗ್ರಾಮೀಣ ಆರ್ಥಿಕತೆ ಬೆಳವಣಿಗೆಗೆ ಪ್ರಯತ್ನ ಸಾಗುತ್ತಿದೆ.

ಹೆಚ್ಚಿನ ಮಾಹಿತಿಗೆ ಹಾಗೂ ಗೆರಟೆಯ ಉತ್ಪನ್ನಗಳಿಗೆ : 9880454373

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

2 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

5 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

11 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

17 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

18 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago