ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.
ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ ಕರ್ತವ್ಯ ಆರಂಭ ಎನ್ನಬಹುದು.
ರಕ್ಷಾ ಬಂಧನದ ಅರ್ಥ ಏನೆಂದರೆ ರಕ್ಷಾ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬುದಾಗಿದೆ.ಈ ಹಬ್ಬವು ಸಹೋದರ ಸಹೋದರಿಯ ನಡುವೆ ಸಂಬಂಧವನ್ನು ಮತ್ತೂ ಗಟ್ಟಿಗೊಳಿಸಿ ಪ್ರೀತಿಯನ್ನು ಹೆಚ್ಚಿಸುವ ಕಾರ್ಯ ನಿರ್ವಹಿಸುತ್ತದೆ. ತನ್ನ ಸಹೋದರಿಯ ರಕ್ಷಣೆಗೆ ಸಹೋದರನೋರ್ವ ಕಂಕಣ ಬದ್ಧನಾಗಲಿದ್ದು, ಸಹೋದರಿಯು ಕೂಡ ಸಹೋದರನ ಏಳಿಗೆ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ರಕ್ಷಾ ಬಂಧನದ ಪದ್ಧತಿ.
ರಕ್ಷಾಬಂಧನದ ಒಂದು ಇತಿಹಾಸ:
ಭಾರತದಲ್ಲಿ ರಕ್ಷಾ ಬಂಧನ ಹಬ್ಬದ ಪ್ರಾರಂಭಕ್ಕೆ ಸಾಕಷ್ಟು ಇತಿಹಾಸದ ಉದಾಹರಣೆಗಳಿವೆ. ಈ ಪೈಕಿ ಒಂದನ್ನು ತಿಳಿಸಲಾಗಿದೆ. ಚಿತ್ತೂರಿನ ರಾಣಿ ಕರ್ಣಾವತಿಯು ಪತಿಯನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಪತಿಯ ಮರಣದ ಕೆಲವೇ ದಿನಗಳಲ್ಲಿ ಮೊಘಲ್ ವಂಶದ ಚಕ್ರವರ್ತಿ ಬಹದ್ದೂರ್ ಷಾ ಚಿತ್ತೂರಿನ ಮೇಲೆ ದಾಳಿ ನಡೆಸಲು ತಯಾರಿ ನಡೆಸುತ್ತಾನೆ.
ಇದನ್ನು ತಿಳಿದ ಕರ್ಣಾವತಿಯು ರಾಜ ಹ್ಯುಮಾಯೂನನಿಗೆ ನೆರವು ಕೋರುವುದರೊಂದಿಗೆ ಸಹೋದರ ಭ್ರಾತೃತ್ವ ಬೆಸೆಯುವ ಉದ್ಧೇಶದಿಂದ ರಾಖಿಯನ್ನು ಕಳುಹಿಸುತ್ತಾಳೆ.
ಆದರೆ ಹ್ಯೂಮಾಯೂನನ ಸೇನೆ ಚಿತ್ತೂರು ತಲುಪುವ ವೇಳೆ ಬಹದ್ದೂರ್ ಷಾ ಸೇನೆ ಚಿತ್ತೂರಿನ ಮೇಲೆ ದಾಳಿ ನಡೆಸಿದ್ದು, ಮಾನ ರಕ್ಷಣೆಗಾಗಿ ಕರ್ಣಾವತಿ ಆತ್ಮಹತ್ಯೆಗೆ ಶರಣಾದಳು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ.
ರಕ್ಷಾ ಬಂಧನಕ್ಕೆ ಒಂದೆ ತಾಯಿಯ ಹೊಟ್ಟೆಯಲ್ಲಿ ಜನಿಸಿದ ಸಹೋದರ ಸಹೋದರಿಯೇ ಆಗಬೇಕೆಂದೇನೂ ಇಲ್ಲ. ರಕ್ತ ಸಂಬಂಧಿಗಳಲ್ಲದ ಮಹಿಳೆಯರು ಇಂದು ಸಹೋದರ ಭಾವನೆಯಿಂದ ಬೇರೆ ಪುರುಷರಿಗೆ ರಾಖಿ ಕಟ್ಟುವ ಮೂಲಕ ಸ್ವಯಂ ಸಹೋದರ ಸಂಬಂಧಿಕತ್ವವನ್ನು ಬೆಸೆದುಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಹಿಂದೂ ಧರ್ಮೀಯ ಸ್ತ್ರೀಯರು ಅನ್ಯಧರ್ಮೀಯ ಪುರುಷರಿಗೆ ರಾಖಿಯನ್ನು ಕಟ್ಟಿ ಶುಭಕೋರುವ ವಿಶೇಷ ಉದಾಹರಣೆಗಳು ನಡೆದಿದೆ.
ರಕ್ಷಾ ಬಂಧನದ ಪರ್ಯಾಯ ಹೆಸರುಗಳು
* ರಾಖಿ ಪೂರ್ಣಿಮಾ
* ರಾಖಿ ಸಲೂನೊ
* ಉಜ್ವಲ್ ಸಿಲೋನೊ
* ರಾಖ್ರಿ ಜೂಲನ್
* ಪೂರ್ಣಿಮಾ ಗಮ್ಹ
* ಪೂರ್ಣಿಮಾ ನರಲಿ
* ಪೌರ್ಣಿಮಾ ಜನೈ
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…