Advertisement
MIRROR FOCUS

ರಕ್ಷಾ ಬಂಧನ ಶುಭಾಶಯ | ರಕ್ಷಾ ಬಂಧನ ಸಹೋದರಿಗೆ ರಕ್ಷಣಾ ದಿಗ್ಬಂಧನ |

Share

ಬಾಲಚಂದ್ರ ಕೋಟೆ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.

ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ ಕರ್ತವ್ಯ ಆರಂಭ ಎನ್ನಬಹುದು.

ರಕ್ಷಾ ಬಂಧನದ ಅರ್ಥ ಏನೆಂದರೆ ರಕ್ಷಾ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬುದಾಗಿದೆ.ಈ ಹಬ್ಬವು ಸಹೋದರ ಸಹೋದರಿಯ ನಡುವೆ ಸಂಬಂಧವನ್ನು ಮತ್ತೂ ಗಟ್ಟಿಗೊಳಿಸಿ ಪ್ರೀತಿಯನ್ನು ಹೆಚ್ಚಿಸುವ ಕಾರ್ಯ ನಿರ್ವಹಿಸುತ್ತದೆ. ತನ್ನ ಸಹೋದರಿಯ ರಕ್ಷಣೆಗೆ ಸಹೋದರನೋರ್ವ ಕಂಕಣ ಬದ್ಧನಾಗಲಿದ್ದು, ಸಹೋದರಿಯು ಕೂಡ ಸಹೋದರನ ಏಳಿಗೆ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ರಕ್ಷಾ ಬಂಧನದ ಪದ್ಧತಿ.

ರಕ್ಷಾಬಂಧನದ ಒಂದು ಇತಿಹಾಸ:

ಭಾರತದಲ್ಲಿ ರಕ್ಷಾ ಬಂಧನ ಹಬ್ಬದ ಪ್ರಾರಂಭಕ್ಕೆ ಸಾಕಷ್ಟು ಇತಿಹಾಸದ ಉದಾಹರಣೆಗಳಿವೆ. ಈ ಪೈಕಿ ಒಂದನ್ನು ತಿಳಿಸಲಾಗಿದೆ. ಚಿತ್ತೂರಿನ ರಾಣಿ ಕರ್ಣಾವತಿಯು ಪತಿಯನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಪತಿಯ ಮರಣದ ಕೆಲವೇ ದಿನಗಳಲ್ಲಿ ಮೊಘಲ್ ವಂಶದ ಚಕ್ರವರ್ತಿ ಬಹದ್ದೂರ್ ಷಾ ಚಿತ್ತೂರಿನ ಮೇಲೆ ದಾಳಿ ನಡೆಸಲು ತಯಾರಿ ನಡೆಸುತ್ತಾನೆ.
ಇದನ್ನು ತಿಳಿದ ಕರ್ಣಾವತಿಯು ರಾಜ ಹ್ಯುಮಾಯೂನನಿಗೆ ನೆರವು ಕೋರುವುದರೊಂದಿಗೆ ಸಹೋದರ ಭ್ರಾತೃತ್ವ ಬೆಸೆಯುವ ಉದ್ಧೇಶದಿಂದ ರಾಖಿಯನ್ನು ಕಳುಹಿಸುತ್ತಾಳೆ.

ಆದರೆ ಹ್ಯೂಮಾಯೂನನ ಸೇನೆ ಚಿತ್ತೂರು ತಲುಪುವ ವೇಳೆ ಬಹದ್ದೂರ್ ಷಾ ಸೇನೆ ಚಿತ್ತೂರಿನ ಮೇಲೆ ದಾಳಿ ನಡೆಸಿದ್ದು, ಮಾನ ರಕ್ಷಣೆಗಾಗಿ ಕರ್ಣಾವತಿ ಆತ್ಮಹತ್ಯೆಗೆ ಶರಣಾದಳು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

ರಕ್ಷಾ ಬಂಧನಕ್ಕೆ ಒಂದೆ ತಾಯಿಯ ಹೊಟ್ಟೆಯಲ್ಲಿ ಜನಿಸಿದ ಸಹೋದರ ಸಹೋದರಿಯೇ ಆಗಬೇಕೆಂದೇನೂ ಇಲ್ಲ. ರಕ್ತ ಸಂಬಂಧಿಗಳಲ್ಲದ ಮಹಿಳೆಯರು ಇಂದು ಸಹೋದರ ಭಾವನೆಯಿಂದ ಬೇರೆ ಪುರುಷರಿಗೆ ರಾಖಿ ಕಟ್ಟುವ ಮೂಲಕ ಸ್ವಯಂ ಸಹೋದರ ಸಂಬಂಧಿಕತ್ವವನ್ನು ಬೆಸೆದುಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಹಿಂದೂ ಧರ್ಮೀಯ ಸ್ತ್ರೀಯರು ಅನ್ಯಧರ್ಮೀಯ ಪುರುಷರಿಗೆ ರಾಖಿಯನ್ನು ಕಟ್ಟಿ ಶುಭಕೋರುವ ವಿಶೇಷ ಉದಾಹರಣೆಗಳು ನಡೆದಿದೆ.

ರಕ್ಷಾ ಬಂಧನದ ಪರ್ಯಾಯ ಹೆಸರುಗಳು

* ರಾಖಿ ಪೂರ್ಣಿಮಾ
* ರಾಖಿ ಸಲೂನೊ
* ಉಜ್ವಲ್ ಸಿಲೋನೊ
* ರಾಖ್ರಿ ಜೂಲನ್
* ಪೂರ್ಣಿಮಾ ಗಮ್ಹ
* ಪೂರ್ಣಿಮಾ ನರಲಿ
* ಪೌರ್ಣಿಮಾ ಜನೈ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

20 minutes ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

34 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

57 minutes ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

1 hour ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

12 hours ago