Advertisement
MIRROR FOCUS

ರಕ್ಷಾ ಬಂಧನ ಶುಭಾಶಯ | ರಕ್ಷಾ ಬಂಧನ ಸಹೋದರಿಗೆ ರಕ್ಷಣಾ ದಿಗ್ಬಂಧನ |

Share

ಬಾಲಚಂದ್ರ ಕೋಟೆ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.

Advertisement

ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ ಕರ್ತವ್ಯ ಆರಂಭ ಎನ್ನಬಹುದು.

ರಕ್ಷಾ ಬಂಧನದ ಅರ್ಥ ಏನೆಂದರೆ ರಕ್ಷಾ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬುದಾಗಿದೆ.ಈ ಹಬ್ಬವು ಸಹೋದರ ಸಹೋದರಿಯ ನಡುವೆ ಸಂಬಂಧವನ್ನು ಮತ್ತೂ ಗಟ್ಟಿಗೊಳಿಸಿ ಪ್ರೀತಿಯನ್ನು ಹೆಚ್ಚಿಸುವ ಕಾರ್ಯ ನಿರ್ವಹಿಸುತ್ತದೆ. ತನ್ನ ಸಹೋದರಿಯ ರಕ್ಷಣೆಗೆ ಸಹೋದರನೋರ್ವ ಕಂಕಣ ಬದ್ಧನಾಗಲಿದ್ದು, ಸಹೋದರಿಯು ಕೂಡ ಸಹೋದರನ ಏಳಿಗೆ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ರಕ್ಷಾ ಬಂಧನದ ಪದ್ಧತಿ.

Advertisement

ರಕ್ಷಾಬಂಧನದ ಒಂದು ಇತಿಹಾಸ:

ಭಾರತದಲ್ಲಿ ರಕ್ಷಾ ಬಂಧನ ಹಬ್ಬದ ಪ್ರಾರಂಭಕ್ಕೆ ಸಾಕಷ್ಟು ಇತಿಹಾಸದ ಉದಾಹರಣೆಗಳಿವೆ. ಈ ಪೈಕಿ ಒಂದನ್ನು ತಿಳಿಸಲಾಗಿದೆ. ಚಿತ್ತೂರಿನ ರಾಣಿ ಕರ್ಣಾವತಿಯು ಪತಿಯನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಪತಿಯ ಮರಣದ ಕೆಲವೇ ದಿನಗಳಲ್ಲಿ ಮೊಘಲ್ ವಂಶದ ಚಕ್ರವರ್ತಿ ಬಹದ್ದೂರ್ ಷಾ ಚಿತ್ತೂರಿನ ಮೇಲೆ ದಾಳಿ ನಡೆಸಲು ತಯಾರಿ ನಡೆಸುತ್ತಾನೆ.
ಇದನ್ನು ತಿಳಿದ ಕರ್ಣಾವತಿಯು ರಾಜ ಹ್ಯುಮಾಯೂನನಿಗೆ ನೆರವು ಕೋರುವುದರೊಂದಿಗೆ ಸಹೋದರ ಭ್ರಾತೃತ್ವ ಬೆಸೆಯುವ ಉದ್ಧೇಶದಿಂದ ರಾಖಿಯನ್ನು ಕಳುಹಿಸುತ್ತಾಳೆ.

Advertisement

ಆದರೆ ಹ್ಯೂಮಾಯೂನನ ಸೇನೆ ಚಿತ್ತೂರು ತಲುಪುವ ವೇಳೆ ಬಹದ್ದೂರ್ ಷಾ ಸೇನೆ ಚಿತ್ತೂರಿನ ಮೇಲೆ ದಾಳಿ ನಡೆಸಿದ್ದು, ಮಾನ ರಕ್ಷಣೆಗಾಗಿ ಕರ್ಣಾವತಿ ಆತ್ಮಹತ್ಯೆಗೆ ಶರಣಾದಳು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

ರಕ್ಷಾ ಬಂಧನಕ್ಕೆ ಒಂದೆ ತಾಯಿಯ ಹೊಟ್ಟೆಯಲ್ಲಿ ಜನಿಸಿದ ಸಹೋದರ ಸಹೋದರಿಯೇ ಆಗಬೇಕೆಂದೇನೂ ಇಲ್ಲ. ರಕ್ತ ಸಂಬಂಧಿಗಳಲ್ಲದ ಮಹಿಳೆಯರು ಇಂದು ಸಹೋದರ ಭಾವನೆಯಿಂದ ಬೇರೆ ಪುರುಷರಿಗೆ ರಾಖಿ ಕಟ್ಟುವ ಮೂಲಕ ಸ್ವಯಂ ಸಹೋದರ ಸಂಬಂಧಿಕತ್ವವನ್ನು ಬೆಸೆದುಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಹಿಂದೂ ಧರ್ಮೀಯ ಸ್ತ್ರೀಯರು ಅನ್ಯಧರ್ಮೀಯ ಪುರುಷರಿಗೆ ರಾಖಿಯನ್ನು ಕಟ್ಟಿ ಶುಭಕೋರುವ ವಿಶೇಷ ಉದಾಹರಣೆಗಳು ನಡೆದಿದೆ.

Advertisement

ರಕ್ಷಾ ಬಂಧನದ ಪರ್ಯಾಯ ಹೆಸರುಗಳು

* ರಾಖಿ ಪೂರ್ಣಿಮಾ
* ರಾಖಿ ಸಲೂನೊ
* ಉಜ್ವಲ್ ಸಿಲೋನೊ
* ರಾಖ್ರಿ ಜೂಲನ್
* ಪೂರ್ಣಿಮಾ ಗಮ್ಹ
* ಪೂರ್ಣಿಮಾ ನರಲಿ
* ಪೌರ್ಣಿಮಾ ಜನೈ

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago