Advertisement
MIRROR FOCUS

ರಕ್ಷಾ ಬಂಧನ ಶುಭಾಶಯ | ರಕ್ಷಾ ಬಂಧನ ಸಹೋದರಿಗೆ ರಕ್ಷಣಾ ದಿಗ್ಬಂಧನ |

Share

ಬಾಲಚಂದ್ರ ಕೋಟೆ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.

ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ ಕರ್ತವ್ಯ ಆರಂಭ ಎನ್ನಬಹುದು.

ರಕ್ಷಾ ಬಂಧನದ ಅರ್ಥ ಏನೆಂದರೆ ರಕ್ಷಾ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬುದಾಗಿದೆ.ಈ ಹಬ್ಬವು ಸಹೋದರ ಸಹೋದರಿಯ ನಡುವೆ ಸಂಬಂಧವನ್ನು ಮತ್ತೂ ಗಟ್ಟಿಗೊಳಿಸಿ ಪ್ರೀತಿಯನ್ನು ಹೆಚ್ಚಿಸುವ ಕಾರ್ಯ ನಿರ್ವಹಿಸುತ್ತದೆ. ತನ್ನ ಸಹೋದರಿಯ ರಕ್ಷಣೆಗೆ ಸಹೋದರನೋರ್ವ ಕಂಕಣ ಬದ್ಧನಾಗಲಿದ್ದು, ಸಹೋದರಿಯು ಕೂಡ ಸಹೋದರನ ಏಳಿಗೆ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದು ರಕ್ಷಾ ಬಂಧನದ ಪದ್ಧತಿ.

ರಕ್ಷಾಬಂಧನದ ಒಂದು ಇತಿಹಾಸ:

ಭಾರತದಲ್ಲಿ ರಕ್ಷಾ ಬಂಧನ ಹಬ್ಬದ ಪ್ರಾರಂಭಕ್ಕೆ ಸಾಕಷ್ಟು ಇತಿಹಾಸದ ಉದಾಹರಣೆಗಳಿವೆ. ಈ ಪೈಕಿ ಒಂದನ್ನು ತಿಳಿಸಲಾಗಿದೆ. ಚಿತ್ತೂರಿನ ರಾಣಿ ಕರ್ಣಾವತಿಯು ಪತಿಯನ್ನು ಕಳೆದುಕೊಂಡು ವೈಧವ್ಯದ ಜೀವನ ನಡೆಸುತ್ತಿದ್ದಳು. ಪತಿಯ ಮರಣದ ಕೆಲವೇ ದಿನಗಳಲ್ಲಿ ಮೊಘಲ್ ವಂಶದ ಚಕ್ರವರ್ತಿ ಬಹದ್ದೂರ್ ಷಾ ಚಿತ್ತೂರಿನ ಮೇಲೆ ದಾಳಿ ನಡೆಸಲು ತಯಾರಿ ನಡೆಸುತ್ತಾನೆ.
ಇದನ್ನು ತಿಳಿದ ಕರ್ಣಾವತಿಯು ರಾಜ ಹ್ಯುಮಾಯೂನನಿಗೆ ನೆರವು ಕೋರುವುದರೊಂದಿಗೆ ಸಹೋದರ ಭ್ರಾತೃತ್ವ ಬೆಸೆಯುವ ಉದ್ಧೇಶದಿಂದ ರಾಖಿಯನ್ನು ಕಳುಹಿಸುತ್ತಾಳೆ.

ಆದರೆ ಹ್ಯೂಮಾಯೂನನ ಸೇನೆ ಚಿತ್ತೂರು ತಲುಪುವ ವೇಳೆ ಬಹದ್ದೂರ್ ಷಾ ಸೇನೆ ಚಿತ್ತೂರಿನ ಮೇಲೆ ದಾಳಿ ನಡೆಸಿದ್ದು, ಮಾನ ರಕ್ಷಣೆಗಾಗಿ ಕರ್ಣಾವತಿ ಆತ್ಮಹತ್ಯೆಗೆ ಶರಣಾದಳು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

ರಕ್ಷಾ ಬಂಧನಕ್ಕೆ ಒಂದೆ ತಾಯಿಯ ಹೊಟ್ಟೆಯಲ್ಲಿ ಜನಿಸಿದ ಸಹೋದರ ಸಹೋದರಿಯೇ ಆಗಬೇಕೆಂದೇನೂ ಇಲ್ಲ. ರಕ್ತ ಸಂಬಂಧಿಗಳಲ್ಲದ ಮಹಿಳೆಯರು ಇಂದು ಸಹೋದರ ಭಾವನೆಯಿಂದ ಬೇರೆ ಪುರುಷರಿಗೆ ರಾಖಿ ಕಟ್ಟುವ ಮೂಲಕ ಸ್ವಯಂ ಸಹೋದರ ಸಂಬಂಧಿಕತ್ವವನ್ನು ಬೆಸೆದುಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಹಿಂದೂ ಧರ್ಮೀಯ ಸ್ತ್ರೀಯರು ಅನ್ಯಧರ್ಮೀಯ ಪುರುಷರಿಗೆ ರಾಖಿಯನ್ನು ಕಟ್ಟಿ ಶುಭಕೋರುವ ವಿಶೇಷ ಉದಾಹರಣೆಗಳು ನಡೆದಿದೆ.

ರಕ್ಷಾ ಬಂಧನದ ಪರ್ಯಾಯ ಹೆಸರುಗಳು

* ರಾಖಿ ಪೂರ್ಣಿಮಾ
* ರಾಖಿ ಸಲೂನೊ
* ಉಜ್ವಲ್ ಸಿಲೋನೊ
* ರಾಖ್ರಿ ಜೂಲನ್
* ಪೂರ್ಣಿಮಾ ಗಮ್ಹ
* ಪೂರ್ಣಿಮಾ ನರಲಿ
* ಪೌರ್ಣಿಮಾ ಜನೈ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

8 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

11 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

16 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

23 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago