ಭಾರತೀಯ ಆಚರಣೆ, ಸಂಸ್ಕೃತಿಗಳ ಹಿಂದೆ ಉದಾತ್ತವಾದ ವಿಚಾರಧಾರೆಗಳು ಹುದುಗಿಕೊಂಡಿವೆ. ನಮ್ಮ ಪ್ರತಿಯೊಂದು ಸಂಪ್ರದಾಯದ ಬಗೆಗೂ ಸಹಸ್ರಾರು ಪುಟಗಳಷ್ಟು ಅಧ್ಯಯನ ನಡೆಸಬಹುದಾದ ಅವಕಾಶಗಳಿವೆ. ರಕ್ಷಾ ಬಂಧನ ಆಚರಣೆಯೂ ಇದಕ್ಕೆ ಹೊರತಾಗಿಲ್ಲ. ಭ್ರಾತೃತ್ವದ ಭಾವತೀವ್ರತೆಯನ್ನು ಹೊರಹೊಮ್ಮಿಸುವ ಹಾಗೂ ತಂಗಿಯ ರಕ್ಷಣೆಯ ಹೊಣೆಯನ್ನು ಅಣ್ಣನಾದವನು ತನ್ನದಾಗಿಸುವ ಪವಿತ್ರ ಗುರುತಾಗಿ ರಕ್ಷಾಬಂಧನ ಆಚರಿಸಲ್ಪಡುತ್ತದೆ ಎಂದು ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.
ಅವರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯದ ಆವರಣದಲ್ಲಿರುವ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಬುಧವಾರ ಆಯೋಜಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಒಂದಾಗಿದ್ದ ಭಾರತವನ್ನು ಒಡೆದಾಳುವ ನೀತಿಯ ಮುಖಾಂತರ ತಮ್ಮ ಕಪಿಮುಷ್ಟಿಗೆ ಒಳಪಡಿಸಿದ್ದ ಬ್ರಿಟಿಷರಿಂದಾಗಿ ಮನಸ್ಸು ಮನಸ್ಸುಗಳು ದೂರಾಗುವ ಪರಿಸ್ಥಿತಿ ಭಾರತದಲ್ಲಿ ಬರುವಂತಾಯಿತು. ಇಂತಹ ಸಂದರ್ಭದಲ್ಲಿ ದೇಶವನ್ನು ತಾಯಿ ಎಂಬ ನೆಲೆಯಲ್ಲಿ ಗುರುತಿಸಿ ‘ಭಾರತ ಮಾತೆ’ ಎಂದು ಕರೆಯಲಾಯಿತು. ಇದರಿಂದಾಗಿ ಭ್ರಾತೃತ್ವದ ಭಾವವನ್ನು ದೇಶದ ಒಳಗಡೆ ಹರಿಸುವುದಕ್ಕೆ ಸಾಧ್ಯವಾಯಿತು. ಒಂದೇ ತಾಯಿಯ ಮಕ್ಕಳಲ್ಲದಿದ್ದರೂ ಭ್ರಾತೃತ್ವವನ್ನು ಸಾಧಿಸುವ ಸಾಧ್ಯತೆಯನ್ನು ರಕ್ಷಾಬಂಧನ ಅನಾವರಣಗೊಳಿಸಿದೆ ಎಂದು ನುಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ತರುವಾಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರಸ್ಪರ ರಕ್ಷೆಯನ್ನು ಕಟ್ಟಿ ರಕ್ಷಾಬಂಧನವನ್ನು ಆಚರಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…