Advertisement
MIRROR FOCUS

#OneNationOneElection | ಒಂದು ರಾಷ್ಟ್ರ, ಒಂದು ಚುನಾವಣೆ | ಸಾಧಕ-ಭಾದಕ ಏನು..? | ಅಧ್ಯಯನಕ್ಕಾಗಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ |

Share

ಒಂದು ರಾಷ್ಟ್ರ-ಒಂದು ಚುನಾವಣೆ – ಇದು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ವಿಷಯ. ಆದರೆ ಪಕ್ಷಗಳ ಒಮ್ಮತದ ಅಭಿಪ್ರಾಯ ಇಲ್ಲದ ಕಾರಣ ಇದು ಇನ್ನೂ ಜಾರಿಗೆ ಬರಲು ಮೀನಮೇಷ ಎಣಿಸುತ್ತಿದೆ. ಇದೀಗ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. 

ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್​​ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ನಿನ್ನೆ ತಿಳಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲು ನಿರ್ಧರಿಸಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ. ಜಿ.20 ಭಾರತದ ಅಂತರಾಷ್ಟ್ರೀಯ ಸ್ಥಾನಮಾನವನ್ನು ಗುರುತಿಸುವ ಸಂಕೇತವೆಂದು ಸರ್ಕಾರ ಹೇಳಿದೆ.

ಈ ವಿಶೇಷ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಅಧಿವೇಶ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಬಲವಾದ ರಾಜಕೀಯ ಸಂದೇಶವನ್ನು ನೀಡುವಂತಿದೆ ಎಂದು ಹೇಳಲಾಗಿದೆ. ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

Source:  ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

51 minutes ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

1 hour ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

2 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

4 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

16 hours ago