Advertisement
ಅನುಕ್ರಮ

ರಾಮ ನವಮಿ | ರಾಮ ಎಂದರೆ ಸರ್ವಸ್ವ | ರಾಮ ಎಂದರೆ ಆದರ್ಶ |

Share

ನಾವು ಮನಸಾ ಸ್ಮರಿಸುವುದು ರಾಮ ಎಂದೇ. ಬಾಲ್ಯದಲ್ಲಿ ‌ ಕೇಳಿದ ರಾಮ ನಾಮ ಮರೆಯುವುದುಂಟೇ. ದೀಪವಿಲ್ಲದೆ ಕತ್ತಲೆಯಲ್ಲಿ ನೆರಳಿನಾಟಕ್ಕೆ ಹೆದರಿದಾಗ ಅಜ್ಜಿ ಹೇಳಿಕೊಟ್ಟ ಧೈರ್ಯ ಮಂತ್ರ ರಾಮ. ಶಾಲೆಗೆ ಹೋಗುವಾಗ ಗುಡುಗು, ಸಿಡಿಲು, ಗಾಳಿ ಮಳೆ ಬಂದಾಗ ಜಪಿಸಲು ಅಮ್ಮ ಹೇಳಿಕೊಟ್ಟ ಶಕ್ತಿ ಮಂತ್ರ ರಾಮ ನಾಮ. ದೂರದೂರಿನಲಿ ವಿಧ್ಯಾಭ್ಯಾಸಕ್ಕೆ ತೆರಳುವಾಗ ಅಪ್ಪ ಹೇಳಿಕೊಟ್ಟ ಸೂತ್ರವೂ ರಾಮನಾಮವೇ.

ಬದುಕಿನ ಒಂದೊಂದು ಮೆಟ್ಟಿಲು ಹತ್ತುವಾಗಲೂ ಜೊತೆಗಿದ್ದು ಶಕ್ತಿ ನೀಡುವ ಒಂದು ಟ್ಯಾಬೆಲ್ಟ್ ಇದೆಯೆಂದರೆ ಅದು ರಾಮ ನಾಮವೇ. ನಮಗೆ ಅನಿರೀಕ್ಷಿತ ಆಘಾತವಾದಾಗ ಹೇಗೆ ಅಮ್ಮನನ್ನು ನೆನೆಯುತ್ತೇವೆಯೋ ಹಾಗೆ ರಾಮನಾಮವೂ ಜೊತೆಯಾಗುವುದು ಸಹಜವೆಂದರೆ ತಪ್ಪಲ್ಲ. ಅದು ನಮಲ್ಲಿ ರಕ್ತಗತವಾಗಿರುವಂತಹುದು.

ಮಕ್ಕಳು ಬಿದ್ದಾಗ ಸಾಮಾನ್ಯವಾಗಿ ಅಯ್ಯೋ ಎಂಬ ಶಬ್ದ ಬಂದುಬಿಡುತ್ತದೆ. ಹಾಗನ್ನಬಾರದು ರಾಮ ರಾಮ ಅನ್ನು ನೋವೇ ತಿಳಿದು., ಅಪಾಯವೂ ಆಗದು ಎಂಬುದು ಹಿರಿಯರ ಮಾತು. ಎಷ್ಟೋ ಬಾರಿ ನಿಜವೆನಿಸುತ್ತವೆ.

ರಾಮನೆಂದರೆ ನಮಗೆ ಒಂದು ಮೂರ್ತಿಯಲ್ಲ, ಪೂಜಿಸುವ ದೇವನಾಗಿ ಮಾತ್ರ ಉಳಿದಿಲ್ಲ. ರಾಮನೆಂದರೆ ನಮಗೆ ಸರ್ವಸ್ವ. ರಾಮ ಯಾವಾಗಲೂ ನಮ್ಮ ನೈತಿಕತೆಯ ಪ್ರತೀಕ. ರಾಮನವಮಿಯೆಂದರೆ ರಾಮ ಹುಟ್ಟಿದ ದಿನ. ಇದು ಯಾವಾಗಲೂ ಯುಗಾದಿ ಕಳೆದು ಎಂಟನೇಯ ದಿನ ಬರುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದಂದು ಆಚರಿಸಲಾಗುತ್ತದೆ.

ರಾಮನ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ.‌ ರಾಮನ ಬಾಲಲೀಲೆಯಾಗಿರಲಿ, ವಿದ್ಯಾಭ್ಯಾಸದ‌, ಸಂಧರ್ಭವಾಗಿರಲಿ ಹೋರಾಟದ ಬದುಕಾಗಿರಲಿ ಎಲ್ಲವೂ ಜನಸಾಮಾನ್ಯರು ಅನುಭವಿಸುವಂತದ್ದೇ ಆಗಿತ್ತು . ರಾಮ ಮನಸಿಗೆ ಹತ್ತಿರವಾಗುವುದು ಇದೇ ವಿಷಯಕ್ಕೆ. ರಾಮಾಯಣವನ್ನು ಎಲ್ಲಾ ವಯಸ್ಸಿನವರೂ ಓದಬಹುದು. ಹಿರಿಯರು ಯಾವತ್ತೂ ಹೇಳುತ್ತಾರೆ, ರಾಮಾಯಣ ಓದಿ ಕೆಟ್ಟವರಿಲ್ಲ, ಅಲ್ಲಿನ ಪ್ರತಿಯೊಂದು ವಿಷಯಗಳು ಸಾರ್ವಕಾಲಿಕ ಸತ್ಯ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago