Advertisement
ಅನುಕ್ರಮ

ರಾಮ ನವಮಿ | ರಾಮ ಎಂದರೆ ಸರ್ವಸ್ವ | ರಾಮ ಎಂದರೆ ಆದರ್ಶ |

Share

ನಾವು ಮನಸಾ ಸ್ಮರಿಸುವುದು ರಾಮ ಎಂದೇ. ಬಾಲ್ಯದಲ್ಲಿ ‌ ಕೇಳಿದ ರಾಮ ನಾಮ ಮರೆಯುವುದುಂಟೇ. ದೀಪವಿಲ್ಲದೆ ಕತ್ತಲೆಯಲ್ಲಿ ನೆರಳಿನಾಟಕ್ಕೆ ಹೆದರಿದಾಗ ಅಜ್ಜಿ ಹೇಳಿಕೊಟ್ಟ ಧೈರ್ಯ ಮಂತ್ರ ರಾಮ. ಶಾಲೆಗೆ ಹೋಗುವಾಗ ಗುಡುಗು, ಸಿಡಿಲು, ಗಾಳಿ ಮಳೆ ಬಂದಾಗ ಜಪಿಸಲು ಅಮ್ಮ ಹೇಳಿಕೊಟ್ಟ ಶಕ್ತಿ ಮಂತ್ರ ರಾಮ ನಾಮ. ದೂರದೂರಿನಲಿ ವಿಧ್ಯಾಭ್ಯಾಸಕ್ಕೆ ತೆರಳುವಾಗ ಅಪ್ಪ ಹೇಳಿಕೊಟ್ಟ ಸೂತ್ರವೂ ರಾಮನಾಮವೇ.

ಬದುಕಿನ ಒಂದೊಂದು ಮೆಟ್ಟಿಲು ಹತ್ತುವಾಗಲೂ ಜೊತೆಗಿದ್ದು ಶಕ್ತಿ ನೀಡುವ ಒಂದು ಟ್ಯಾಬೆಲ್ಟ್ ಇದೆಯೆಂದರೆ ಅದು ರಾಮ ನಾಮವೇ. ನಮಗೆ ಅನಿರೀಕ್ಷಿತ ಆಘಾತವಾದಾಗ ಹೇಗೆ ಅಮ್ಮನನ್ನು ನೆನೆಯುತ್ತೇವೆಯೋ ಹಾಗೆ ರಾಮನಾಮವೂ ಜೊತೆಯಾಗುವುದು ಸಹಜವೆಂದರೆ ತಪ್ಪಲ್ಲ. ಅದು ನಮಲ್ಲಿ ರಕ್ತಗತವಾಗಿರುವಂತಹುದು.

ಮಕ್ಕಳು ಬಿದ್ದಾಗ ಸಾಮಾನ್ಯವಾಗಿ ಅಯ್ಯೋ ಎಂಬ ಶಬ್ದ ಬಂದುಬಿಡುತ್ತದೆ. ಹಾಗನ್ನಬಾರದು ರಾಮ ರಾಮ ಅನ್ನು ನೋವೇ ತಿಳಿದು., ಅಪಾಯವೂ ಆಗದು ಎಂಬುದು ಹಿರಿಯರ ಮಾತು. ಎಷ್ಟೋ ಬಾರಿ ನಿಜವೆನಿಸುತ್ತವೆ.

ರಾಮನೆಂದರೆ ನಮಗೆ ಒಂದು ಮೂರ್ತಿಯಲ್ಲ, ಪೂಜಿಸುವ ದೇವನಾಗಿ ಮಾತ್ರ ಉಳಿದಿಲ್ಲ. ರಾಮನೆಂದರೆ ನಮಗೆ ಸರ್ವಸ್ವ. ರಾಮ ಯಾವಾಗಲೂ ನಮ್ಮ ನೈತಿಕತೆಯ ಪ್ರತೀಕ. ರಾಮನವಮಿಯೆಂದರೆ ರಾಮ ಹುಟ್ಟಿದ ದಿನ. ಇದು ಯಾವಾಗಲೂ ಯುಗಾದಿ ಕಳೆದು ಎಂಟನೇಯ ದಿನ ಬರುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದಂದು ಆಚರಿಸಲಾಗುತ್ತದೆ.

ರಾಮನ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ.‌ ರಾಮನ ಬಾಲಲೀಲೆಯಾಗಿರಲಿ, ವಿದ್ಯಾಭ್ಯಾಸದ‌, ಸಂಧರ್ಭವಾಗಿರಲಿ ಹೋರಾಟದ ಬದುಕಾಗಿರಲಿ ಎಲ್ಲವೂ ಜನಸಾಮಾನ್ಯರು ಅನುಭವಿಸುವಂತದ್ದೇ ಆಗಿತ್ತು . ರಾಮ ಮನಸಿಗೆ ಹತ್ತಿರವಾಗುವುದು ಇದೇ ವಿಷಯಕ್ಕೆ. ರಾಮಾಯಣವನ್ನು ಎಲ್ಲಾ ವಯಸ್ಸಿನವರೂ ಓದಬಹುದು. ಹಿರಿಯರು ಯಾವತ್ತೂ ಹೇಳುತ್ತಾರೆ, ರಾಮಾಯಣ ಓದಿ ಕೆಟ್ಟವರಿಲ್ಲ, ಅಲ್ಲಿನ ಪ್ರತಿಯೊಂದು ವಿಷಯಗಳು ಸಾರ್ವಕಾಲಿಕ ಸತ್ಯ.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

21 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago