ನಾವು ಮನಸಾ ಸ್ಮರಿಸುವುದು ರಾಮ ಎಂದೇ. ಬಾಲ್ಯದಲ್ಲಿ ಕೇಳಿದ ರಾಮ ನಾಮ ಮರೆಯುವುದುಂಟೇ. ದೀಪವಿಲ್ಲದೆ ಕತ್ತಲೆಯಲ್ಲಿ ನೆರಳಿನಾಟಕ್ಕೆ ಹೆದರಿದಾಗ ಅಜ್ಜಿ ಹೇಳಿಕೊಟ್ಟ ಧೈರ್ಯ ಮಂತ್ರ ರಾಮ. ಶಾಲೆಗೆ ಹೋಗುವಾಗ ಗುಡುಗು, ಸಿಡಿಲು, ಗಾಳಿ ಮಳೆ ಬಂದಾಗ ಜಪಿಸಲು ಅಮ್ಮ ಹೇಳಿಕೊಟ್ಟ ಶಕ್ತಿ ಮಂತ್ರ ರಾಮ ನಾಮ. ದೂರದೂರಿನಲಿ ವಿಧ್ಯಾಭ್ಯಾಸಕ್ಕೆ ತೆರಳುವಾಗ ಅಪ್ಪ ಹೇಳಿಕೊಟ್ಟ ಸೂತ್ರವೂ ರಾಮನಾಮವೇ.
ಬದುಕಿನ ಒಂದೊಂದು ಮೆಟ್ಟಿಲು ಹತ್ತುವಾಗಲೂ ಜೊತೆಗಿದ್ದು ಶಕ್ತಿ ನೀಡುವ ಒಂದು ಟ್ಯಾಬೆಲ್ಟ್ ಇದೆಯೆಂದರೆ ಅದು ರಾಮ ನಾಮವೇ. ನಮಗೆ ಅನಿರೀಕ್ಷಿತ ಆಘಾತವಾದಾಗ ಹೇಗೆ ಅಮ್ಮನನ್ನು ನೆನೆಯುತ್ತೇವೆಯೋ ಹಾಗೆ ರಾಮನಾಮವೂ ಜೊತೆಯಾಗುವುದು ಸಹಜವೆಂದರೆ ತಪ್ಪಲ್ಲ. ಅದು ನಮಲ್ಲಿ ರಕ್ತಗತವಾಗಿರುವಂತಹುದು.
ಮಕ್ಕಳು ಬಿದ್ದಾಗ ಸಾಮಾನ್ಯವಾಗಿ ಅಯ್ಯೋ ಎಂಬ ಶಬ್ದ ಬಂದುಬಿಡುತ್ತದೆ. ಹಾಗನ್ನಬಾರದು ರಾಮ ರಾಮ ಅನ್ನು ನೋವೇ ತಿಳಿದು., ಅಪಾಯವೂ ಆಗದು ಎಂಬುದು ಹಿರಿಯರ ಮಾತು. ಎಷ್ಟೋ ಬಾರಿ ನಿಜವೆನಿಸುತ್ತವೆ.
ರಾಮನೆಂದರೆ ನಮಗೆ ಒಂದು ಮೂರ್ತಿಯಲ್ಲ, ಪೂಜಿಸುವ ದೇವನಾಗಿ ಮಾತ್ರ ಉಳಿದಿಲ್ಲ. ರಾಮನೆಂದರೆ ನಮಗೆ ಸರ್ವಸ್ವ. ರಾಮ ಯಾವಾಗಲೂ ನಮ್ಮ ನೈತಿಕತೆಯ ಪ್ರತೀಕ. ರಾಮನವಮಿಯೆಂದರೆ ರಾಮ ಹುಟ್ಟಿದ ದಿನ. ಇದು ಯಾವಾಗಲೂ ಯುಗಾದಿ ಕಳೆದು ಎಂಟನೇಯ ದಿನ ಬರುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದಂದು ಆಚರಿಸಲಾಗುತ್ತದೆ.
ರಾಮನ ಹುಟ್ಟಿದ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ. ರಾಮನ ಬಾಲಲೀಲೆಯಾಗಿರಲಿ, ವಿದ್ಯಾಭ್ಯಾಸದ, ಸಂಧರ್ಭವಾಗಿರಲಿ ಹೋರಾಟದ ಬದುಕಾಗಿರಲಿ ಎಲ್ಲವೂ ಜನಸಾಮಾನ್ಯರು ಅನುಭವಿಸುವಂತದ್ದೇ ಆಗಿತ್ತು . ರಾಮ ಮನಸಿಗೆ ಹತ್ತಿರವಾಗುವುದು ಇದೇ ವಿಷಯಕ್ಕೆ. ರಾಮಾಯಣವನ್ನು ಎಲ್ಲಾ ವಯಸ್ಸಿನವರೂ ಓದಬಹುದು. ಹಿರಿಯರು ಯಾವತ್ತೂ ಹೇಳುತ್ತಾರೆ, ರಾಮಾಯಣ ಓದಿ ಕೆಟ್ಟವರಿಲ್ಲ, ಅಲ್ಲಿನ ಪ್ರತಿಯೊಂದು ವಿಷಯಗಳು ಸಾರ್ವಕಾಲಿಕ ಸತ್ಯ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…